Prashanth Sambargi: ಶಿವಣ್ಣನಿಗೆ ಹಣ ಮುಖ್ಯ ಅಷ್ಟೇ, ಶಿವಣ್ಣನ ಬಗ್ಗೆ ನಾಲಿಗೆ ಹರಿಬಿಟ್ಟ ಪ್ರಶಾಂತ್ ಸಂಭರ್ಗಿ.
ಶಿವರಾಜ್ ಕುಮಾರ್ ಅವರಿಗೆ ಹಣ ಮುಖ್ಯ ಸ್ಕ್ರಿಪ್ಟ್ ಅಲ್ಲ ಎಂದು ಹೇಳಿಕೆ ನೀಡಿದ್ದಾರೆ ಪ್ರಶಾಂತ್ ಸಂಭರ್ಗಿ.
Prashanth Sambrgi About Shiva Rajkumar: ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ (Shiva Rajkumar) ಅವರು ಇದೀಗ ಪತ್ನಿ ಗೀತಾ ಜೊತೆ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರಕ್ಕೆ ಇಳಿದಿದ್ದಾರೆ.
ನಟ ಶಿವರಾಜ್ ಕುಮಾರ್ ಪ್ರಚಾರದಲ್ಲಿ ಬ್ಯುಸಿಯಾಗಿರುವ ಸಮಯದಲ್ಲಿ ಬಿಗ್ ಬಾಸ್ ಪ್ರಶಾಂತ್ ಸಂಬರ್ಗಿ (Prashanth Sambargi) ಅವರು ಶಿವರಾಜ್ ಕುಮಾರ್ ಅವರ ಬಗ್ಗೆ ಕೇವಲವಾಗಿ ಮಾತನಾಡಿರುವ ಘಟನೆ ನಡೆದಿದೆ.
ಶಿವಣ್ಣನ ಬಗ್ಗೆ ಕೇವಲವಾಗಿ ಮಾತನಾಡಿದ ಪ್ರಶಾಂತ್ ಸಂಬರ್ಗಿ
ಶಿವರಾಜ್ ಕುಮಾರ್ ಅವರು ಪ್ರಚಾರ ಮಾಡುತ್ತಿರುವ ವಿಚಾರವಾಗಿ ಮಾತನಾಡಿದ ಸಂಬರ್ಗಿ ಅವರು ಇದೀಗ ಶಿವಣ್ಣನ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ. ಆದರೆ ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡುತ್ತಾರೆ ಎಂದಿದ್ದಾರೆ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಭರ್ಗಿ.
ಪ್ರಶಾಂತ್ ಸಂಬರ್ಗಿ ವಿರುದ್ಧ ಕಿಡಿಕಾರುತ್ತಿರುವ ಶಿವಣ್ಣನ ಅಭಿಮಾನಿಗಳು
ಶಿವರಾಜ್ ಕುಮಾರ್ ಅವರು ತುಂಬಾ ಎಮೋಷನಲ್ ಜೀವಿ. ಸಿನಿಮಾ ಪ್ಲಾಪ್ ಆದರೂ ಅವರು ಕೇರ್ ಮಾಡಲ್ಲ. ಪೇಮೆಂಟ್ ತಗೊಂಡು ಇನ್ನೊಂದು ಸಿನಿಮಾ ಸೈನ್ ಮಾಡಿಬಿಡುತ್ತಾರೆ ಎಂದಿದ್ದಾರೆ. ಅದೇ ಫಾರ್ಮೂಲ ರಾಜಕೀಯದಲ್ಲೂ ಅನುಸರಿಸಿದ್ದಾರೆ.
ಕ್ಯಾಂಡಿಡೆಟ್ ಗೆದ್ದರೂ ಸೋತರು ಎಲ್ಲಾ ಒಂದೇ. ಏನೋ ಹೇಳುತ್ತಾರಲ್ಲ ಗೆದ್ದರೆ ಬೆಟ್ಟ ಇಲ್ಲ ಅಂದ್ರೆ. ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದು ಪೋಸ್ಟ್ ಮಾಡಿರುವ ಸಂಬರ್ಗಿ ಅವರ ಪೋಸ್ಟ್ ಗೆ ತೀವ್ರ ವಿರೋಧ ವ್ಯಕ್ತವಾಗಿದೆ. ನಟ ಶಿವಣ್ಣನ ಅಭಿಮಾನಿಗಳು ಪ್ರಶಾಂತ್ ಸಂಬರ್ಗಿ ವಿರುದ್ಧ ಕಿಡಿಕಾರುತ್ತಿದ್ದಾರೆ.
ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ಯಾವಾಗಲು ವಿವಾದದಲ್ಲಿಯೇ ಹೆಚ್ಚು ಸುದ್ದಿಯಲ್ಲಿದ್ದಾರೆ. ಪ್ರಶಾಂತ್ ಸಂಬರ್ಗಿ ಅವರು ಹೆಚ್ಚು ಬೇರೆಯವರ ವಿಷಯಕ್ಕೆ ತಲೆ ಹಾಕುತ್ತಾರೆ ಎಂದು ಶಿವಣ್ಣ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ.