Image Credit: thehindu
Price Hike From August First: ದೇಶದಲ್ಲಿ ಪ್ರತಿ ತಿಂಗಳ ಆರಂಭದಲ್ಲಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಳಿತವಾಗುದು ಸಹಜವಾಗಿದೆ. ಸರ್ಕಾರದ ಕೆಲವು ನಿರ್ಧಾರಗಳು ಜನಸಾಮಾನ್ಯರಿಗೆ ಸಮಾಧಾನ ತಂದರೆ ಇನ್ನು ಕೆಲವು ನಿರ್ಧಾರಗಳು ಬಿಸಿ ಮುಟ್ಟಿಸುವಂತಿರುತ್ತದೆ.
ಬೆಲೆ ಏರಿಕೆ ಜನಸಾಮಾನ್ಯರನ್ನು ಕಂಗಾಲು ಮಾಡುತ್ತದೆ. ಇದೀಗ ಜನ ಜೀವನದ ಮೇಲೆ ಪರಿಣಾಮ ಬೀರುವ ಸರ್ಕಾರದ ಒಂದಿಷ್ಟು ತೀರ್ಮಾನಗಳು ಆಗಸ್ಟ್ ಒಂದರಿಂದ ಜಾರಿಗೆ ಬರಲಿದೆ.
ವಿದ್ಯುತ್ ಉಚಿತ
ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಜನರು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಯೋಜನೆಯಲ್ಲಿ ಗರಿಷ್ಠ 200 ಯೂನಿಟ್ ಒಳಗೆ ವಿದ್ಯುತ್ ಬಳಸಿದರೆ ವಿದ್ಯುತ್ ಬಿಲ್ ಗೆ ಹಣ ಪಾವತಿ ಮಾಡುವಂತಿಲ್ಲ. 200 ಯೂನಿಟ್ ಗಿಂತ ಅಧಿಕ ವಿದ್ಯುತ್ ಬಳಸಿದರೆ ವಿದ್ಯುತ್ ಬಿಲ್ ಗೆ ಹಣ ಪಾವತಿ ಮಾಡಬೇಕಾಗುತ್ತದೆ.
ಹೋಟೆಲ್ ತಿನಿಸು ದುಬಾರಿ
ಅಕ್ಕಿ, ತರಕಾರಿ, ಹಾಲು, ಸೇರಿ ವಿವಿಧ ಪದಾರ್ಥಗಳ ಬೆಲೆ ಏರಿಕೆಯಿಂದ ಹೋಟೆಲ್ ಮಾಲೀಕರು ಊಟ ತಿಂಡಿಗಳ ದರ ಏರಿಸಲು ಮುಂದಾಗಿದ್ದಾರೆ. ಆಗಸ್ಟ್ 1 ರಿಂದ ಟೀ, ಕಾಫಿ ಬೆಲೆ ಕೂಡ ಹೆಚ್ಚಳವಾಗಲಿದೆ. ಅಕ್ಕಿ ದರ ಏರಿರುವುದರಿಂದ ಇಡ್ಲಿ, ದೋಸೆ ಬೆಲೆ ಕೂಡ ದುಬಾರಿಯಾಗಲಿದೆ.
ಹಾಲಿನ ದರದಲ್ಲಿ ಏರಿಕೆ
ಹಾಲು ಒಕ್ಕೂಟಗಳ ಒತ್ತಡಕ್ಕೆ ಮಣಿದ ಸರ್ಕಾರ ಹಾಲಿನ ದರದಲ್ಲಿ 3 ರೂಪಾಯಿ ಏರಿಸಲು ಒಪ್ಪಿಗೆ ನೀಡಿತು. ಒಂದೊಂದು ಹಾಲು ಮಹಾಮಂಡಳದಲ್ಲಿ ಪ್ರತಿ ಲೀಟರ್ ಹಾಲಿಗೆ ಒಂದೊಂದು ದರ ಇದ್ದು, ಹಾಲಿನ ದರಕ್ಕೆ ಹೆಚ್ಚುವರಿಯಾಗಿ ಮೂರು ರೂಪಾಯಿ ಸೇರಿಸಿ ಮಾರಾಟ ಮಾಡುತ್ತಾರೆ ಹಾಗೆ ಆ ಹೆಚ್ಚುವರಿ ಹಣವನ್ನು ಹಾಲು ಉತ್ಪಾದಕರಿಗೆ ನೀಡಬೇಕೆಂದು ಸರ್ಕಾರ ಷರತ್ತು ಹಾಕಿದೆ. ಹಾಲಿನ ದರ ಏರಿಕೆಯಿಂದ ಹಾಲು ಉತ್ಪಾದಕರಿಗೆ ಹೆಚ್ಚುವರಿ ಮೊತ್ತ ಸಿಗುತ್ತದೆ ಹಾಗೆ ಹಾಲು ಖರೀದಿಸುವವರಿಗೆ ಬೆಲೆ ಸ್ವಲ್ಪ ಅಧಿಕವಾಗಲಿದೆ.
ವಾಹನಗಳ ತೆರಿಗೆಯಲ್ಲಿ ಹೆಚ್ಚಳ
ಹೊಸ ತೆರಿಗೆ ಪದ್ಧತಿ ಆಗಸ್ಟ್ ನಿಂದ ಜಾರಿಗೆ ಬರುತ್ತಿದೆ. ಅತಿ ಭಾರದ ಸರಕು ವಾಹನಗಳು, ಮೋಟಾರು ಕ್ಯಾಬ್, ಶಾಲಾ ಕಾಲೇಜು ವಾಹನಗಳ ತೆರಿಗೆ ಹೆಚ್ಚಳವಾಗಲಿದೆ. ಶಾಲಾ ಮಕ್ಕಳು ತೆರಳುವ ವಾಹನಗಳ ಪ್ರತಿ ಚದರ ಮೀಟರ್ ತೆರಿಗೆಯನ್ನು 20 ರೂ.ನಿಂದ 100ಕ್ಕೆ ಏರಿಕೆ ಮಾಡಲಾಗಿದೆ. ಕ್ಯಾಬ್ ಗಳಿಗೆ ಶೇಕಡಾ 9 ರಷ್ಟು ತೆರಿಗೆ ವಿಧಿಸಲಾಗುತ್ತದೆ.
ಆದಾಯ ತೆರಿಗೆ (Income Tax)
ಆದಾಯ ತೆರಿಗೆ ಪಾವತಿಸುವವರಿಗೆ ಜುಲೈ 31 ಕೊನೆಯ ದಿನ. ಆಗಸ್ಟ್ ಒಂದರಿಂದ ತೆರಿಗೆ ಪಾವತಿ ಮೇಲೆ ದಂಡ ವಿಧಿಸಲಾಗುತ್ತದೆ. ವಾರ್ಷಿಕವಾಗಿ 5 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವವರು ನಿಗದಿತ ಗಡುವಾದ ಜುಲೈ 31ರೊಳಗೆ ಆದಾಯ ತೆರಿಗೆ ಸಲ್ಲಿಸದಿದ್ದರೆ ದಂಡ ಕಟ್ಟುವುದು ಅನಿವಾರ್ಯ.
ಎತ್ತರದ ಕಟ್ಟಡಕ್ಕೆ ಶುಲ್ಕ
ಎತ್ತರದ ಕಟ್ಟಡಗಳು ಇನ್ನು ಮುಂದೆ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕಾಗುತ್ತದೆ. ನಿರಾಕ್ಷೇಪಣಾ ಪತ್ರ ಪಡೆಯುವಾಗ ನಿಯಮ ಪಾಲಿಸುವ ಜೊತೆ ಕಟ್ಟಡ ಮಾಲಿಕರು ಶುಲ್ಕವನ್ನೂ ಕಟ್ಟಬೇಕಾಗುತ್ತದೆ. ಶುಲ್ಕ, ನಿಯಮದ ಮಾಹಿತಿ ಶೀಘ್ರವೇ ಸ್ಪಷ್ಟವಾಗಲಿದೆ.
Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…
PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…
Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…
Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…
July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…
7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…