Image Credit: Original Source
Ration Card Cancellation Latest Update: ರಾಜ್ಯದಲ್ಲಿ BPL ಪಡಿತರ ಚೀಟಿಯು ಜನಸಾಮಾನ್ಯರಿಗೆ ಎಷ್ಟು ಪ್ರಯೋಜನಕಾರಿ ಆಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದೇ ಇದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯಲು BPL Ration Card ಹೊಂದುವುದು ಅತಿ ಅವಶ್ಯಕ.
ಹೋಗಿರುವ ಅರ್ಹರು ಪಡಿತರ ಚೀಟಿಯನ್ನು ಪಡೆಯಲು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ರಾಜ್ಯದಲ್ಲಿ BPL ರೇಷನ್ ಕಾರ್ಡ್ ಪಡೆಯುವಲ್ಲಿ ಕೂಡ ಸ್ಯಾಮ್ ನಡೆಯುತ್ತಿದೆ. ಹೌದು, ರಾಜ್ಯದಲ್ಲಿ ಸಾಕಷ್ಟು ಅನರ್ಹರು ಕೂಡ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
BPL ಕಾರ್ಡ್ ಇದ್ದವರಿಗೆ ಶಾಕಿಂಗ್ ಸುದ್ದಿ
ಸದ್ಯ ದೇಶದಲ್ಲಿ ಲೋಕಸಭಾ ಚುನಾವಣೆ ಮುಗಿದಿದೆ . ಚುನಾವಣೆಯ ನಂತರ ದೇಶದಲ್ಲಿ ಅನೇಕ ಯೋಜನೆಗಳ ಜೊತೆಗೆ ಬದಲಾವಣೆ ಕೂಡ ತರಲಾಗಿದೆ. ಸದ್ಯ ರಾಜ್ಯ ಸರ್ಕಾರ ಮುಖ್ಯವಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡುವುದರ ಜೊತೆಗೆ ಇಂತಹ ಕುಟುಂಬದ ರೇಷನ್ ಕಾರ್ಡ್ ಅನ್ನು ರದ್ದು ಮಾಡಲು ಕೂಡ ಮುಂದಾಗಿದೆ.
ಈಗಾಗಲೇ ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 1.03 ಕೋಟಿ ಆದ್ಯತಾ ಪಡಿತರ ಕುಟುಂಬಗಳು (ಬಿಪಿಎಲ್) ಮತ್ತು 10.83 ಲಕ್ಷ ಅಂತ್ಯೋದಯ ಕುಟುಂಬಗಳು ಒಟ್ಟಾಗಿ 1.14 ಕೋಟಿ ನಿಗದಿಪಡಿಸಿದೆ. ಆದರೆ ರಾಜ್ಯದಲ್ಲಿ ಈಗಾಗಲೇ ಕೇಂದ್ರದ ಮಿತಿ ಮೀರಿ 10.33 ಲಕ್ಷ ಹೆಚ್ಚುವರಿ ಬಿಪಿಎಲ್ ಕುಟುಂಬಗಳಿದ್ದು, ಅವರಿಗೆ ರಾಜ್ಯ ಸರಕಾರ ಪ್ರತಿ ತಿಂಗಳು ತನ್ನ ಸ್ವಂತ ಖರ್ಚಿನಲ್ಲಿ ಪಡಿತರ ನೀಡುತ್ತಿದೆ. ಇದೇ ವೇಳೆ ಲಕ್ಷಾಂತರ ಹೊಸ ಅರ್ಜಿಗಳು ಬಾಕಿ ಉಳಿದಿವೆ. ಹಾಗಾಗಿ ಅನರ್ಹರನ್ನು ಪತ್ತೆ ಹಚ್ಚಲು ಸಿದ್ಧತೆ ನಡೆಸಲಾಗುತ್ತಿದೆ.
ಇಂತಹ ಕುಟುಂಬಗಳ ರೇಷನ್ ಕಾರ್ಡ್ ರದ್ದು ಮಾಡಲು ಆದೇಶ
ಆರ್ಥಿಕವಾಗಿ ಸಬಲರಾಗಿರುವ ಆದರೆ ಬಿಪಿಎಲ್ ಕಾರ್ಡ್ಗಳನ್ನು ಹೊಂದಿರುವವರು ಅಥವಾ ಹಿಂದೆ ಬಿಪಿಎಲ್ ಆಗಿದ್ದವರು ಮತ್ತು ಈಗ ಬಡತನ ರೇಖೆಗಿಂತ ಮೇಲಿರುವವರನ್ನು ಗುರುತಿಸುವುದು ಸರ್ಕಾರದ ಗುರಿಯಾಗಿದೆ. ಅಲ್ಲದೇ ಬಿಪಿಎಲ್ ಕುಟುಂಬಗಳಲ್ಲಿ ಮೃತಪಟ್ಟವರ ಹೆಸರನ್ನು ಅಳಿಸಿಲ್ಲ. ಸತ್ತವರ ಹೆಸರನ್ನು ತೆಗೆದುಹಾಕಿದರೆ ಹೊರೆ ಕಡಿಮೆಯಾಗುತ್ತವೆ.
ಈ ಬಗ್ಗೆ ಕೂಡ ಸರ್ಕಾರ ನಿಯಮ ರೂಪಿಸಿದೆ. ಪ್ರತಿ ತಿಂಗಳು ಒಟ್ಟು ಬಿಪಿಎಲ್ ಕಾರ್ಡ್ ಹೊಂದಿರುವವರ ಶೇ. 80-83ರಷ್ಟು ಕುಟುಂಬಗಳು ಮಾತ್ರ ಪಡಿತರ ಪಡೆಯುತ್ತಿವೆ. ಉಳಿದವರು ಹಲವು ತಿಂಗಳಿಂದ ಪಡಿತರನ್ನು ಪಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸತತ ಮೂರು ತಿಂಗಳು ಪಡಿತರ ಪಡೆಯಲು ಬಾರದ ಕಾರ್ಡ್ ಗಳನ್ನು ಅಮಾನತುಗೊಳಿಸಿ, ಸತತ 6 ತಿಂಗಳು ಬರದಿದ್ದರೆ ಸಂಪೂರ್ಣ ರದ್ದುಪಡಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.
7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…
Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…
Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…
Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…
Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…
Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…