Image Credit: Original Source
Ration Card Cancelled: ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಲಾಭವನ್ನು ರಾಜ್ಯದ ಜನತೆ ಪಡೆದುಕೊಳ್ಳುತ್ತಿದ್ದಾರೆ. ಐದು ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಎಲ್ಲ ಯೋಜನೆಗಳು ಕೂಡ ಅನುಷ್ಠಾನಗೊಂಡಿದ್ದು, ಈ ಯೋಜನೆಗಳಿಂದ ಜನರು ಸಾಕಷ್ಟು ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎನ್ನಬಹುದು. ಇನ್ನು ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವಾಗ ಕೇಂದ್ರ ಸರ್ಕಾರ ನೀಡುತ್ತಿರುವ ಉಚಿತ ಪಡಿತರ ಸೌಲಭ್ಯಕ್ಕೆ ಹೆಚ್ಚುವರಿಯಾಗಿ ಒಂದಿಷ್ಟು ಸೌಲಭ್ಯವನ್ನು ಸೇರಿಸಿತ್ತು.
ಅನ್ನ ಭಾಗ್ಯ ಯೋಜನೆಯಡಿ 5KG ಅಕ್ಕಿಯ ಬದಲಾಗಿ 10KG ಅಕ್ಕಿಯನ್ನು ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ ಅಕ್ಕಿ ದಾಸ್ತಾನಿನ ಕೊರತೆಯಿಂದ ರಾಜ್ಯ ಸರ್ಕಾರ ಈ ಯೋಜನೆಯಲ್ಲಿ ಬದಲಾವಣೆಯನ್ನು ತಂದಿರುವುದು ನಿಮಗೆಲ್ಲರಿಗೂ ತಿಳಿದೇ ಇದೆ. ಸದ್ಯ ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ.
ಉಚಿತ ಅಕ್ಕಿ ಪಡೆಯುತ್ತಿರುವವರಿಗೆ ಹೊಸ ನಿಯಮ
ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳು 5KG ಉಚಿತ ಅಕ್ಕಿಯ ಜೊತೆಗೆ 5KG ಅಕ್ಕಿಯ ಬದಲಾಗಿ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಸದ್ಯ ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇಂತವರಿಗೆ ಇನ್ನುಮುಂದೆ ಯೋಜನೆಯ ಹಣ ಜಮಾ ಮಾಡದಿರಲು ಹಾಗೂ ಈ ಕುಟುಂಬದವರ ರೇಷನ್ ಕಾರ್ಡ್ ಅನ್ನು ರದ್ದು ಮಾಡಲು ನಿರ್ಧಾರ ಕೈಗೊಂಡಿದೆ. ರಾಜ್ಯ ಸರ್ಕಾರ ಈ ನಿರ್ಧಾರ ರಾಜ್ಯದ ಲಕ್ಷಾಂತರ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳ ಮೇಲೆ ಪರಿಣಾಮ ಬೀರಲಿದೆ.
ಇಂತಹ ಕುಟುಂಬಗಳ BPL ರೇಷನ್ ಕಾರ್ಡ್ ರದ್ದು ಮಾಡಲು ಸರ್ಕಾರದ ಆದೇಶ
ರಾಜ್ಯ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರಿಗಾಗಿ ಉಚಿತ ಪಡಿತರ ಸೌಲಭ್ಯವನ್ನು ನೀಡುತ್ತಿದೆ. BPL ಕಾರ್ಡ್ ಹೊಂದಿರುವ ಅರ್ಹರು ಈ ಯೋಜನೆಯಡಿ ಉಚಿತ ಪಡಿತರನ್ನು ಪಡೆದುಕೊಳ್ಳುತ್ತಿದ್ದಾರೆ. ಇನ್ನು ಉಚಿತ ಪಡಿತರನ್ನು ಸರ್ಕಾರ ನೀಡುತ್ತಿದ್ದರು ಕೂಡ ಇದರ ಪ್ರಯೋಜನವನ್ನು ಕೆಲವರು ಪಡೆದುಕೊಳ್ಳುತ್ತಿಲ್ಲ. ಇದನ್ನು ಗಮನಿಸಿದ ಸರ್ಕಾರ ಇದೀಗ ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.
ಕಳೆದ ಆರು ತಿಂಗಳುಗಳಿಂದ ಉಚಿತ ಪಡಿತರನ್ನು ಪಡೆಯದೇ ಸರ್ಕಾರದ ಇನ್ನಿತರ ಯೋಜನೆಗಳ ಲಾಭವನ್ನು ಯಾರು ಪಡೆಯುತ್ತಿದ್ದರೋ, ಅಂತವರ ರೇಷನ್ ಕಾರ್ಡ್ ಅನ್ನು ರದ್ದು ಮಾಡಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ಇಂತಹ ಕುಟುಂಭದ ಲಕ್ಷಾಂತರ ಪಡಿತರ ಚೀಟಿ ರದ್ದಾಗಿದ್ದು, ಸರ್ಕಾರ ಈ ಕಾರ್ಯದಲ್ಲಿ ತೊಡಗಿಕೊಂಡಿದೆ. ನಿಮ್ಮ ರೇಷನ್ ಕಾರ್ಡ್ ರದ್ದಾದರೆ ಉಚಿತ ಗ್ಯಾರಂಟಿ ಯೋಜನೆಯ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಎನ್ನುವುದರ ಬಗ್ಗೆ ನಿಮಗೆ ಅರಿವಿರಲಿ.
Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…
Ola Electric Scooter Sales In 2024: ಭಾರತೀಯ ಆಟೋ ವಲಯದಲ್ಲಿ ಟಿವಿಎಸ್, ಹೀರೋ, ಎಥರ್ ಕಂಪನಿಗಳು ಹೊಸ ಮಾದರಿಯ…
Gruha Lakshmi New Rule: ರಾಜ್ಯ ಸರ್ಕಾರ ರಾಜ್ಯದ ಎಲ್ಲ ಅರ್ಹರ ಫಲಾನುಭವಿಗಳಿಗೆ ಮಾಸಿಕವಾಗಿ 2000 ಹಣವನ್ನು ಬಿಡುಗಡೆ ಮಾಡುತ್ತಿದೆ.…
Mahindra XUV700 Price And Feature: Maruti Suzuki, Hyundai, Tata, Renault, Kia ಸೇರಿದಂತೆ ದೇಶದ ಇನ್ನಿತರ ಜನಪ್ರಿಯ…
Post Office Job Recruitment From July 15th: Indian Post Office ಆಗಾಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ…
School-College Bandh Tomorrow: ಸದ್ಯ 2024 ರ ಮೇ ನಲ್ಲಿ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ…