Ration Card: ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಮತ್ತೊಂದು ಸಿಹಿಸುದ್ದಿ, ಸರ್ಕಾರದ ಇನ್ನೊಂದು ಆದೇಶ.
ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಸಿಹಿಸುದ್ದಿ
Ration Card Distribution: ರಾಜ್ಯದಲ್ಲಿ ರೇಷನ್ ಕಾರ್ಡ್ ಗೆ ಹೆಚ್ಚಿನ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ರಾಜ್ಯದ ಜನತೆಗೆ ರೇಷನ್ ಕಾರ್ಡ್ ಮಾಡುಸುವಲ್ಲಿ ಬ್ಯುಸಿ ಆಗಿದ್ದಾರೆ. ಇನ್ನು ರಾಜ್ಯ ಸರಕಾರ ನೀಡುವ ಉಚಿತ ಗ್ಯಾರಂಟಿ ಯೋಜನೆಗಳ ಲಾಭ ಅರ್ಹರ ಕೈ ತಪ್ಪಿಹೋಗಬಾರದು ಎನ್ನುವ ಕಾರಣಕ್ಕೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸರ್ಕಾರ ಅನುಮತಿ ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಸಿಹಿಸುದ್ದಿ ಹೊರಬಿದ್ದಿದೆ. ಆಹಾರ ಇಲಾಖೆಯಿಂದ ಹೊಸ ಅಪ್ಡೇಟ್ ಬಂದಿದೆ.
![Ration Card Latest News Update](https://nadunudi.in/wp-content/uploads/2024/02/Ration-Card-Latest-News-Update.png)
ರೇಷನ್ ಕಾರ್ಡ್ ಕುರಿತಾಗಿ ಸರ್ಕಾರದ ಇನ್ನೊಂದು ಆದೇಶ
ಈ ಹಿಂದೆ ಆಹಾರ ಇಲಾಖೆ ಹೊಸ APL ಮತ್ತು BPL ಕಾರ್ಡ್ ಅರ್ಜಿ ಸಲ್ಲಿಕೆ ಹಾಗೂ ತಿದ್ದುಪಡಿಗೆ ಅವಕಾಶವನ್ನು ನೀಡಿದೆ. ಯಾರು ಯಾರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದಾರೋ ಅಂತವರ ಅರ್ಜಿಯನ್ನು ಆಹಾರ ಇಲಾಖೆ ಪರಿಶೀಲನೆ ನಡೆಸುತ್ತಿದೆ. ಯಾರು ಸರ್ಕಾರದ ಉಚಿತ ಪಡಿತರ ವಿತರಣೆಯ ಲಾಭವನ್ನು ಪಡೆಯಲು ಅರ್ಹರಾಗಿರುತ್ತಾರೋ ಅಂತವರ ಅರ್ಜಿಯನ್ನು ಆಹಾರ ಇಲಾಖೆ ಸ್ವೀಕರಿಸಲಿದೆ.
ಹೊಸ ಪಡಿತರ ಚೀಟಿಗಾಗಿ ಸುಮಾರು 3 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು ಇಲಾಖೆಯಿಂದ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ವಿಲೇವಾರಿ ಕಾರ್ಯ ಕೂಡ ಆರಂಭಗೊಂಡಿದೆ. ಹೊಸ ರೇಷನ್ ಕಾರ್ಡ್ ಅರ್ಜಿದಾರರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸದ್ಯ ಈ ದಿನದಂದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಅಷ್ಟಕ್ಕೂ ರಾಜ್ಯ ಸರ್ಕಾರ ಹೊಸ ಪಡಿತರ ವಿತರಣೆಗೆ ಯಾವ ದಿನಾಂಕವನ್ನು ನಿಗದಿಪಡಿಸಿದೆ ಎನ್ನುವ ಬಗ್ಗೆ ವಿವರ ಇಲ್ಲಿದೆ.
![Ration Card Distribution](https://nadunudi.in/wp-content/uploads/2024/02/Ration-Card-Distribution-1.png)
ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಮತ್ತೊಂದು ಸಿಹಿಸುದ್ದಿ
ಸರ್ಕಾರದ ಗ್ಯಾರಂಟಿ ಯೋಜನೆಗಳು ಘೋಷಣೆಯಾದ ಬೆನ್ನಲ್ಲೇ ಲಕ್ಷಾಂತರ ಜನರು BPL ಮತ್ತು APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ನೀಡಿತ್ತು. ಇನ್ನು ಲಕ್ಷಾಂತರ ಫಲಾನುಭವಿಗಳು ಹೊಸ ರೇಷನ್ ಬರುವಿಕೆಯಲ್ಲಿ ಕಾದು ಕುಳಿತಿದ್ದಾರೆ.
ವಿಧಾನಸಭಾ ಚುನಾವಣೆಗೂ ಮುನ್ನ BPL ಕಾರ್ಡ್ಗೆ ಅರ್ಜಿ ಸಲ್ಲಿಸಿದವರಿಗೆ ಶೀಘ್ರದಲ್ಲಿ ಹೊಸ ಕಾರ್ಡ್ ವಿತರಣೆ ನಡೆಸಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ಈಗಾಗಲೇ ಹೇಳಿಕೆ ನೀಡಿದ್ದಾರೆ. ಇನ್ನು ಪಡಿತರ ಚೀಟಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲಿಸಿ ಏಪ್ರಿಲ್ 1 ರಿಂದ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಇಂದು ತಿಳಿಸಿದ್ದಾರೆ.