Image Credit: Original Source
Ration Card Link With Aadhar Card: ರಾಜ್ಯದಲ್ಲಿ BPL ಪಡಿತರ ಚೀಟಿಯು ಜನಸಾಮಾನ್ಯರಿಗೆ ಎಷ್ಟು ಪ್ರಯೋಜನಕಾರಿ ಆಗಿದೆ ಎನ್ನುವ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯಲು BPL Ration Card ಹೊಂದುವುದು ಅತಿ ಅವಶ್ಯಕ. ಸದ್ಯ ಪಡಿತರ ಚೀಟಿಯನ್ನು ಆಧಾರ್ ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.
ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ ಪಡಿತರ ಚೀಟಿಯ ಲಾಭ ಪಡೆಯುತ್ತಿದ್ದಾರೆ ಎಂಬ ಸುದ್ದಿ ಸರ್ಕಾರಕ್ಕೆ ಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಇದನ್ನು ತಡೆಯುವ ನಿಟ್ಟಿನಲ್ಲಿ ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಮುಂದಾಗಿದೆ.
ರೇಷನ್ ಆಧಾರ್ ಲಿಂಕ್ ಗೆ ಮತ್ತೆ ಗಡುವು ವಿಸ್ತರಿಸಿದ ಸರ್ಕಾರ
ಆಧಾರ್ ಅನ್ನು ಪರಿಶೀಲಿಸಲು ಅಥವಾ ಲಿಂಕ್ ಮಾಡಲು ಹೊಸ ಗಡುವು ಜೂನ್ 30, 2024 ರ ಬದಲಿಗೆ ಸೆಪ್ಟೆಂಬರ್ 30 ಆಗಿದೆ. ಈ ಗಡುವನ್ನು ಸರ್ಕಾರ ಈ ಹಿಂದೆ ಹಲವು ಬಾರಿ ವಿಸ್ತರಿಸಿದೆ. ಪಡಿತರ ಚೀಟಿಯನ್ನು ಆಧಾರ್ ನೊಂದಿಗೆ ಲಿಂಕ್ ಮಾಡುವುದು ಅವಶ್ಯಕ.
ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡದಿದ್ದರೆ ಜುಲೈ 1 ರಿಂದ ಫಲಾನುಭವಿಗಳಿಗೆ ಅಗ್ಗದ ಪಡಿತರ ಮತ್ತು ಉಚಿತ ಪಡಿತರ ಪ್ರಯೋಜನ ಸಿಗುವುದಿಲ್ಲ ಎಂದು ಮಾಧ್ಯಮ ವರದಿಯಲ್ಲಿ ಹೇಳಲಾಗುತ್ತಿದೆ. ಆದರೆ ಈಗ ಸರ್ಕಾರವು ಕೊನೆಯ ದಿನಾಂಕವನ್ನು ಮೂರು ತಿಂಗಳು ವಿಸ್ತರಿಸಿದೆ, ಅಂದರೆ ಸೆಪ್ಟೆಂಬರ್ 30 ರ ವರೆಗೆ ಅರ್ಹ ಫಲಾನುಭವಿಗಳು ಪಡಿತರ ಪ್ರಯೋಜನವನ್ನು ಪಡೆಯುತ್ತಾರೆ.
ಈ ದಾಖಲೆಗಳು ಕಡ್ಡಾಯ
*ರೇಷನ್ ಕಾರ್ಡ್
*ಕುಟುಂಬದ ಸದಸ್ಯರ ಆಧಾರ್ ಕಾರ್ಡ್
*ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
*ಬ್ಯಾಂಕ್ ಪಾಸ್ ಬುಕ್
*ಕುಟುಂಬದ ಯಜಮಾನನ ಎರಡು ಪಾಸ್ ಪೋರ್ಟ್ ಅಳತೆಯ ಪೋಟೋ
ಈ ರೀತಿಯಾಗಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿ
*ಮೊದಲು ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಗೆ ಭೇಟಿ ನೀಡಬೇಕು.
*ಪಡಿತರ ಚೀಟಿ ಮತ್ತು ಆಧಾರ್ ಲಿಂಕ್ ಆಯ್ಕೆ ಮಾಡಿ.
*ಪಡಿತರ ಚೀಟಿ ಸಂಖ್ಯೆ ಹಾಗೂ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ.
*ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಸಲ್ಲಿಸು ಬಟನ್ ಕ್ಲಿಕ್ ಮಾಡಿ.
*ಆಧಾರ್ ಪಡಿತರ ಲಿಂಕ್ ಪುಟದಲ್ಲಿ OTP ನಮೂದಿಸಿ.
Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…
Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…
Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…
Credit Card late Payment Charges: ಕ್ರೆಡಿಟ್ ಕಾರ್ಡ್ ಬಳಸುವುದರಿಂದ ಹಲವು ಪ್ರಯೋಜನಗಳನ್ನೂ ಪಡೆಯಬಹುದು. ಕ್ರೆಡಿಟ್ ಕಾರ್ಡ್ ಬಳಸುವ ಮೂಲಕ,…
Vijayalakshmi Wrote A Letter: ಸದ್ಯ ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ದರ್ಶನ್ ಜೈಲು ಪಾಲಾಗಿದ್ದಾರೆ. ತಮ್ಮ ಗೆಳತಿಗೆ ಅಶ್ಲೀಲ ಸಂದೇಶ…
RBI Latest Update: ಡಿಜಿಟಲ್ ವಂಚನೆಯನ್ನು ತಡೆಗಟ್ಟಲು ಇತರ ಕ್ರಮಗಳ ಜೊತೆಗೆ ಗ್ರಾಹಕರಲ್ಲಿ ಜಾಗೃತಿ ಮತ್ತು ಶೈಕ್ಷಣಿಕ ಉಪಕ್ರಮಗಳನ್ನು ಹೆಚ್ಚಿಸಲು…