Shawarma Ban In Karnataka: ಸದ್ಯ ರಾಜ್ಯ ಸರ್ಕಾರ ಜನಸಾಮನ್ಯರಿಗಾಗಿ ಅನೇಕ ಸೌಲಭ್ಯವನ್ನು ನೀಡುವುದರ ಜೊತೆಗೆ ಜನರ ಜೀವಕ್ಕೆ ಹಾನಿಯಾಗುವಂತಹ ಆಹಾರ ಪದಾರ್ಥಗಳನ್ನು ನಿಷೇಧ ಮಾಡುವತ್ತ ಗಮನ ಹರಿಸುತ್ತಿದೆ. ಇತ್ತೀಚೆಗಷ್ಟೇ ಸರ್ಕಾರ ಗೋಬಿ ಮಂಚೂರಿ, ಕಲರ್ ಹಾಕಿರುವ ಕಬಾಬ್, ಪಾನಿಪುರಿ, ಕಾಟನ್ ಕ್ಯಾಂಡಿಯನ್ನು ನಿಷೇದಿಸಿತ್ತು.
ಈ ಜನಪ್ರಿಯ ತಿಂಡಿಗಳಲ್ಲಿ ಹಾನಿಕಾರಣ ಅಂಶಗಳು ಕಂಡುಬಂದ ಹಿನ್ನಲೆ ಸರ್ಕಾರ ಈ ಆಹಾರ ಪದಾರ್ಥಗಳನ್ನು ನಿಷೇಧಿಸಿತ್ತು. ಸದ್ಯ ಈ ಎಲ್ಲ ಆಹಾರ ಪದಾರ್ಥಗಳನ್ನು ನಿಷೇಧಿಸಿರುವ ಸರ್ಕಾರ ಇದರ ಬೆನ್ನಲ್ಲೇ ಇನ್ನೊಂದು ಕ್ರಮ ಕೈಗೊಂಡಿದೆ. ಹೌದು, ಜನರ ಅರೋಗ್ಯ ಸುರಕ್ಷತೆಗಾಗಿ ಸರ್ಕಾರ ಈ ಆಹಾರ ಪದಾರ್ಥವನ್ನು ನಿಷೇಧಿಸಲು ಮುಂದಾಗಿದೆ.
ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ, ಪಾನಿಪುರಿ ಬೆನ್ನಲೇ ಈ ಜನಪ್ರಿಯ ಆಹಾರ ಬ್ಯಾನ್
ರಾಜ್ಯಾದ್ಯಂತ ಸಂಗ್ರಹಿಸಲಾದ ಹಲವಾರು Shawarma ಮಾದರಿಗಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ ಮತ್ತು ಯೀಸ್ಟ್ ಪತ್ತೆಯಾಗಿದೆ. ಹೀಗಾಗಿ ಆಹಾರ ಮತ್ತು ಗುಣಮಟ್ಟ ಇಲಾಖೆ (FASSAI) ಶವರ್ಮಾ ನಿಷೇಧವನ್ನು ಪರಿಗಣಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಇತ್ತೀಚಿನ ದಿನಗಳಲ್ಲಿ ಶವರ್ಮಾ ತಿಂದು ಅಸ್ವಸ್ಥರಾಗಿ ಸಾವನ್ನಪ್ಪುತ್ತಿರುವ ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಇದರ ಬೆನ್ನಲ್ಲೇ ಕ್ರಮ ಕೈಗೊಂಡಿರುವ ಆರೋಗ್ಯ ಇಲಾಖೆ ರಾಜ್ಯಾದ್ಯಂತ ಒಟ್ಟು 17 ಕಡೆ ಶವರ್ಮಾ ಮಾದರಿ ಸಂಗ್ರಹಿಸಿದ್ದು, 17 ರಲ್ಲಿ 8 ಕಡೆ ಬ್ಯಾಕ್ಟೀರಿಯಾ, ಯೀಸ್ಟ್ ಪತ್ತೆಯಾಗಿದೆ. ಹೀಗಾಗಿ ಶವರ್ಮಾ ಅಸುರಕ್ಷಿತ ಎಂದು ದೃಢಪಟ್ಟಿದೆ.
ರಾಜ್ಯದಲ್ಲಿ ಇನ್ನುಮುಂದೆ ಸಿಗಲ್ಲ ಶವರ್ಮಾ
ಆಹಾರ ತಯಾರಿಕೆಯ ಸಮಯದಲ್ಲಿ ನೈರ್ಮಲ್ಯದ ಕೊರತೆ, ದೀರ್ಘಕಾಲದ ಶೇಖರಣೆ ಮತ್ತು ವಿತರಣೆಯ ಸಮಯದಲ್ಲಿ ನೈರ್ಮಲ್ಯದ ಕೊರತೆಯಿಂದಾಗಿ ಬ್ಯಾಕ್ಟೀರಿಯಾ ಮತ್ತು ಯೀಸ್ಟ್ ಗಳು ಇರುತ್ತವೆ. ಹೀಗಾಗಿ ಎಲ್ಲಾ ಶವರ್ಮಾ ಆಹಾರ ತಯಾರಕರು ಆಹಾರ ಸುರಕ್ಷತೆ ನಿಯಮಗಳನ್ನು ಅನುಸರಿಸಬೇಕು. ಅಸುರಕ್ಷಿತ ಶವರ್ಮಾ ನೀಡುವ ಅಂಗಡಿಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಶವರ್ಮಾ ಮಾರಾಟಗಾರರಿಗೆ FSSAI ನೋಂದಣಿ ಕಡ್ಡಾಯವಾಗಿದೆ. ನೋಂದಣಿ ಪ್ರಮಾಣ ಪತ್ರ ನೀಡದಿದ್ದರೆ ಮಾರಾಟ ನಿಷೇಧಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನುಮುಂದೆ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ, ಪಾನಿಪುರಿ, ಕಬಾಬ್ ಗಳಂತೆ ಶವರ್ಮಾ ಕೂಡ ರಾಜ್ಯದಲ್ಲಿ ನಿಷೇಧವಾಗಿರುವ ಆಹಾರಗಳ ಪಟ್ಟಿಗೆ ಸೇರಲಿದೆ.
Rohith Sharma Ate Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…
BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…
KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…
Canara Bank Account Minimum Balance: ಸಾಮಾನ್ಯವಾಗಿ ಎಲ್ಲರು ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆದಿರುತ್ತಾರೆ. ಖಾತೆಗಳನ್ನು ತೆರೆಯುದರ ಜೊತೆಗೆ…
New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ…
Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…