Ads By Google

Shiva Rajkumar: ಪ್ರಮಾಣವಚನ ಕಾರ್ಯಕ್ರಮದಲ್ಲಿ ನಟ ಶಿವಣ್ಣನ ಕಾಲಿಗೆ ಪೆಟ್ಟು, ಭಯಪಡುವ ಅಗತ್ಯ ಇಲ್ಲ.

Actor Shiva Rajkumar

Image Source: Public Tv

Ads By Google

Actor Shiva Rajkumar: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆಗಿದೆ. ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ಮುಖ್ಯಮಾಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು ಸರ್ಕಾರ ರಚನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ಶಿವರಾಜ್ ಕುಮಾರ್ (Shiva Rajkumar) ಕಾಲು ಉಳುಕಿಸಿಕೊಂಡು ನಡೆದ ಘಟನೆ ನಡೆದಿದೆಯಂತೆ.

Image Credit: publictv

ಪ್ರಮಾಣ ವಚನ ಸ್ವೀಕಾರ ಮಾಡಿದ ಕಾರ್ಯಕ್ರಮದಲ್ಲಿ ಕಾಲು ಉಳುಕಿಸಿಕೊಂಡ ಶಿವಣ್ಣ
ಇಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅದ್ದೂರಿಯಾಗಿ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ. ಸಾಕಷ್ಟು ರಾಷ್ಟ್ರೀಯ ನಾಯಕರು, ಸಿನಿಮಾ ಸೆಲಬ್ರೆಟಿಗಳು, ರಾಜಕೀಯ ಮುಖಂಡರು ಹಾಗು ಅಧಿಕ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೆ ವೇಳೆ ಸ್ಯಾಂಡಲ್ ವುಡ್ ನ ಖ್ಯಾತ ನಟ ಶಿವರಾಜ್ ಕುಮಾರ್ ಸಹ ಭಾಗಿಯಾಗಿದ್ದರು.

ಇದೆ ವೇಳೆ ಶಿವಣ್ಣನಿಗೆ ಕಾಲು ಉಳುಕಿದ್ದು ಅವರು ಪತ್ನಿ ಗೀತಾ ಸಹಾಯದಿಂದ ತೆರಳಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಮೆಟ್ಟಿಲು ಇಳಿಯುವಾಗ ಈ ಘಟನೆ ನಡೆದಿದ್ದು, ಶಿವರಾಜ್ ಕುಮಾರ್ ಕಾಲು ಉಳುಕಿಸಿಕೊಂಡು ನಡೆದಿದ್ದಾರೆ ಎನ್ನಲಾಗುತ್ತಿದೆ.

Image Credit: indiatimes

ಸರ್ಕಾರ ರಚನೆ ಕಾರ್ಯಕ್ರಮದಲ್ಲಿ ಭಾಗಿಯಾದ ಸ್ಯಾಂಡಲ್ ವುಡ್ ಸ್ಟಾರ್ಸ್
ಈ ಬಾರಿ ಚುನಾವಣೆಯಲ್ಲೂ ಶಿವರಾಜ್ ಕುಮಾರ್, ದುನಿಯಾ ವಿಜಯ್, ಸಾಧುಕೋಕಿಲಾ, ನಿಶ್ವಿಕಾ ನಾಯ್ಡು, ರಮ್ಯಾ ಸೇರಿದಂತೆ ಹಲವರು ಪ್ರಚಾರದಲ್ಲೂ ಪಾಲ್ಗೊಂಡಿದ್ದರು.

ಕೆಲವರು ಸಿದ್ದರಾಮಯ್ಯನವರ ಪರವಾಗಿ ಪ್ರಚಾರದಲ್ಲಿ ತೊಡಗಿದ್ದರೆ, ಇನ್ನೂ ಹಲವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು. ಎಲ್ಲ ನಟ ನಟಿಯರು ಸಹ ಇಂದು ನಡೆದ ಸರ್ಕಾರ ರಚನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

Ads By Google
Sujatha Poojari: Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in