Image Source: Tv9 Kannada
Siddaramaiah Abour Fire Crackers: ದೇಶದಲ್ಲಿ ಈಗಾಗಲೇ ಪಟಾಕಿ ದುರಂತದಿಂದ ಸಾಕಷ್ಟು ಸಾವು ನೋವುಗಳು ಎದುರಾಗಿದೆ ಎನ್ನಬಹುದು. ಅನೇಕ ಪ್ರದೇಶಗಲ್ಲಿ ಆಗಾಗ ಪಟಾಕಿಯಿಂದ ಭಯಾನಕ ದುರಂತ ಸಂಭವಿಸುತ್ತದೆ. ಇತೀಚೆಗಷ್ಟೇ ಅತ್ತಿಬೆಲೆಯ ಬಾಲಾಜಿ ಟ್ರೇಡರ್ಸ್ ನ ಪಟಾಕಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು 14 ಮಂದಿ ಬಲಿಯಾದ ಘಟನೆ ಬೆಳಕಿಗೆ ಬಂದಿದೆ.
ಈ ದುರಂತದಲ್ಲಿ ಅಮಾಯಕರು ಸಜೀವ ದಹನವಾಗಿದ್ದು, ಪಟಾಕಿ ಅಂಗಡಿಯಲ್ಲಿ ಯಾವುದೇ ಸುರಕ್ಷತಾ ಕ್ರಮ ಕೈಗೊಂಡಿಲ್ಲ ಎನ್ನುವುದು ತಿಳಿದಿದೆ. ಸದ್ಯ ಅತ್ತಿಬೆಲೆ ಪಟಾಕಿ ದುರಂತದ ಬಳಿಕ ರಾಜ್ಯ ಸರ್ಕಾರ ಎಚ್ಚುಟ್ಟುಕೊಂಡು ಇದೀಗ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ.
ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ
ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಇದೀಗ ರಾಜ್ಯಾದ್ಯಂತ ಪಟಾಕಿ ಲೈಸೆನ್ಸ್ ದಾರರ ಸ್ಥಳ ಪರಿಶೀಲನೆ ನಡೆಸಿದೆ. ಪಟಾಕಿ ಅಂಗಡಿಯ ಮಾಲೀಕರು ಪಡೆದ ಲೈಸೆನ್ಸ್ ನಲ್ಲಿ ಯಾವುದೇ ತಪ್ಪಿದ್ದರು ಕೂಡ ಅವರ ವಿರುದ್ಧ ಕ್ರಮ ಕೈಗೊಳ್ಳೂ ಸರ್ಕಾರ ಮುಂದಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ರಾಜ್ಯದ ಮುಖ್ಯಮಂತ್ರಿ Siddaramaiah ಅವರು ಆದೇಶ ಹೊರಡಿಸಿದ್ದಾರೆ.
ಪಟಾಕಿ ಬಳಕೆಗೆ ಹೊಸ ನಿಯಮ ಜಾರಿಗೊಳಿಸಿದ ಸಿದ್ದರಾಮಯ್ಯ
ರಾಜ್ಯ ಸರ್ಕಾರ ಇದೀಗ ಅತ್ತಿಬೆಲೆ ದುರಂತದ ಹಿನ್ನೆಲೆ ಮಹತ್ವದ ಸಭೆ ನಡೆಸಿ ಈ ಬಗ್ಗೆ ಚರ್ಚಿಸಿದೆ. ಇದೀಗ Siddaramaiah ಪಟಾಕಿ ಬಳಕೆಗೆ ಹೊಸ ನಿಯಮ ಜಾರಿಗೊಳಿಸಿದ್ದಾರೆ. ಗಣೇಶ ಹಬ್ಬ, ಮದುವೆ, ರಾಜಕೀಯ ಸಮಾರಂಭಗಳಲ್ಲಿ ಪಟಾಕಿ ನಿಷೇಧಗೊಳಿಸಲಾಗುತ್ತದೆ. ಹಾಗು ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಪ್ರತಿಯೊಬ್ಬರೂ, ದೀಪಾವಳಿಯಲ್ಲಿ ಹಸಿರು ಪಟಾಕಿ ಬಳಸಬೇಕು.
ಸುಪ್ರೀಂ ಕೋರ್ಟ್ ಆದೇಶದಂತೆ ಕಡ್ಡಾಯವಾಗಿ ಹಸಿರು ಪಟಾಕಿಯನ್ನೇ ಹೊಡೆಯಬೇಕು, ಇನ್ನಿತರ ಸಮಾರಂಭಗಳಲ್ಲಿ ಪಟಾಕಿ ನಿಷೇಧಗೊಳಿಸಲಾಗುತ್ತದೆ. ರಾಜಕೀಯ ಕಾರ್ಯಕ್ರಮ ,ಗಣೇಶ ಹಬ್ಬ ಹಾಗೂ ಮದುವೆಯಲ್ಲಿ ಪಟಾಕಿ ಸಿಡಿಸುವಂತಿಲ್ಲ, ಪಟಾಕಿ ಸಿಡಿಸುವಾಗ ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಆದೇಶ ಹೊರಡಿಸಿದ್ದಾರೆ.
Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…
Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…
Darshan Case New Update: ಸದ್ಯ ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…
Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…
Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…
New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…