Gruha Arogya: ರಾಜ್ಯದ ಜನರಿಗೆ ಇನ್ನೊಂದು ಗ್ಯಾರೆಂಟಿ, ಡಿಸೆಂಬರ್ ಜಾರಿಗೆ ಬರಲಿದೆ ಇನ್ನೊಂದು ಮಹತ್ವದ ಯೋಜನೆ.

ಕಾಂಗ್ರೆಸ್ ಸರ್ಕಾರದ ಹೊಸ ಆರೋಗ್ಯ ಯೋಜನೆ ಡಿಸೇಂಬರ್ ನಲ್ಲಿ ಜಾರಿಗೆ ಬರಲಿದೆ.

Karnataka Gruha Arogya Yojana: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ BPL ಪಡಿತರ ಚೀಟಿದಾರರಿಗೆ ಅನೇಕ ಯೋಜನೆಯನ್ನು ಪರಿಚಯಿಸಿದೆ. ಸದ್ಯ ರಾಜ್ಯದಲ್ಲಿ BPL ಪಡಿತರ ಚೀಟಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಕಾಂಗ್ರೆಸ್ ಸರಕಾರ ರಾಜ್ಯದ ಜನತೆಗೆ ಅನೇಕ ಕಲ್ಯಾಣ ಯೋಜನೆಯನ್ನು ಪರಿಚಯಿಸುತ್ತ ರಾಜ್ಯದ ಬಡ ನಾಗರಿಕರಿಗೆ ಆರ್ಥಿಕವಾಗಿ ಸ್ಥಿರತೆ ಕಾಣಲು ಸಹಾಯವಾಗುತ್ತಿದೆ.

ಇನ್ನು ಇತ್ತೀಚೆಗಂತೂ ಜನರ ಆರೋಗ್ಯ ಪರಿಸ್ಥಿತಿ ಹೆಚ್ಚಿನ ಏರುಪೇರು ಉಂಟಾಗುತ್ತಿರುವುದು ಕಂಡುಬಂದಿದೆ. ಸಣ್ಣ ವಯಸ್ಸಿನ ಮಕ್ಕಳಿನಿಂದ ಹಿಡಿದು ವಯೋವೃದ್ಧರು ತಮ್ಮ ಅನಾರೋಗ್ಯಕ್ಕೆ ಸೂಕ್ತ ಸಮಯದಲ್ಲಿ ಚಿಕಿತ್ಸೆಯನ್ನು ಪಡೆಯಲು ಸಾಧ್ಯವಾಗದೆ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎನ್ನಬಹುದು.

Karnataka Gruha Arogya Yojana
Image Credit: Original Source

ರಾಜ್ಯದಲ್ಲಿ ಜನತೆಗೆ ಉಚಿತ ಆರೋಗ್ಯ ಯೋಜನೆ
ಸದ್ಯ ರಾಜ್ಯದ ಜನರ ಆರೋಗ್ಯದ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗಾಗಿ ಹೊಸ ಆರೋಗ್ಯ ಯೋಜನೆಯನ್ನು ಪರಿಚಯಿಸಿದೆ. ರಾಜ್ಯದ BPL ಪಡಿತರ ಚೀಟಿದಾರರು ಕಾಂಗ್ರೆಸ್ ಸರ್ಕಾರ ನೂತನ ಆರೋಗ್ಯ ಸೌಲಭ್ಯವನ್ನು ಪಡೆದುಕೊಳ್ಲಬಹುದು. ಕಾಂಗ್ರೆಸ್ ಸರ್ಕಾರ ಪರಿಚಯಿಸಲಿರುವ ಹೊಸ ಯೋಜನೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸದಸ್ಯರಾದ ದಿನೇಶ್ ಗುಂಡೂರಾವ್ ಅವರು ಅಧಿಕೃತ ಹೇಳಿಕೆ ನೀಡಿದ್ದಾರೆ.

ರಾಜ್ಯದ ಜನರಿಗೆ ಇನ್ನೊಂದು ಗ್ಯಾರೆಂಟಿ
ಜನರಲ್ಲಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳಿಗೆ ಉಚಿತ ಔಷಧಿಯನ್ನು ಒದಗಿಸುವ ‘Gruha Arogya’ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆ ರೂಪಿಸಲು ಚಿಂತನೆ ನಡೆಸಿದೆ. ಈ ಯೋಜನೆಯಡಿ ಆರೋಗ್ಯ ಸಿಬ್ಬಂಧಿ ಎಲ್ಲ ಮನೆಗಳಿಗೆ ಭೇಟಿ ನೀಡಿ ಎಲ್ಲಾ ಕುಟುಂಬದ ಸದ್ಯಸ್ಯರನ್ನು ತಪಾಸಣೆ ನಡೆಸಲಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಈ Gruha Arogya ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸುತ್ತಿದೆ.

Siddaramaiah Govt Gruha Arogya Scheme
Image Credit: Original Source

ಡಿಸೆಂಬರ್ ಜಾರಿಗೆ ಬರಲಿದೆ ಇನ್ನೊಂದು ಮಹತ್ವದ ಯೋಜನೆ
ಹೃದಯಾಘಾತ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ ಸೇರಿದಂತೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಸ್ಥಳದಲ್ಲೇ ಔಷಧ ನೀಡಲಿದ್ದು, ಸಂಕೀರ್ಣ ಕಾಯಿಲೆಯನ್ನು ಪತ್ತೆ ಹಚ್ಚಿ ಗಂಭೀರ ಸಮಸ್ಯೆ ಇದ್ದವರನ್ನು ಗುರುತಿಸಿ ಸೂಕ್ತ ಚಿಕೆತ್ಸೆಗೆ ಶಿಫಾರಸ್ಸು ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

Join Nadunudi News WhatsApp Group

ಇನ್ನುಮುಂದೆ ರಾಜ್ಯದ ಜನತೆಗೆ ಸರ್ಕಾರ ಐದು ಉಚಿತ ಯೋಜನೆಗಳ ಜೊತೆಗೆ ಗೃಹ ಆರೋಗ್ಯ ಯೋಜನೆಯ ಲಾಭವನ್ನು ಕೂಡ ಪಡೆಯಬಹುದಾಗಿದೆ. ಸದ್ಯದಲ್ಲೇ ಈ ಯೋಜನೆಯ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಲಾಗುತ್ತದೆ. ರಾಜ್ಯದ ಜನತೆಗೆ ಈ ಯೋಜನೆಯ ಲಾಭ ಪಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಸಿಬ್ಬಂದಿ ಮತ್ತು ವೈದ್ಯರ ನೇಮಕಾತಿ ಪ್ರಕ್ರಿಯೆ ಆರಂಭಗೊಳಿಸಿದೆ. December ನಲ್ಲಿ ಮನೆ ಮನೆಯ ಬಳಿ ಉಚಿತ ಚಿಕಿತ್ಸೆ ತಲುಪಲಿದೆ.

Join Nadunudi News WhatsApp Group