Image Credit: Original Source
Siddaramaiah Latest News: ಸದ್ಯ ರಾಜ್ಯದಲ್ಲಿ ರೈತರು ಬೆಳೆಹಾನಿಯಿಂದ ನಷ್ಟವನ್ನು ಅನುಭವಿಸುತ್ತಿದ್ದಷ್ಟೇ. ರೈತರ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದೆ. ಆದಾಗ್ಯೂ, ರೈತರಿಗೆ ತಮ್ಮ ಬೆಳೆ ನಷ್ಟದ ಚಿಂತೆ ದೂರ ಆಗಿಲ್ಲ ಎನ್ನಬಹುದು.
ಸಾಕಷ್ಟು ಕಷ್ಟಪಟ್ಟು ಮಾಡಿದ ಕೃಷಿ ನಾಶವಾಗಿರುವುದು ರೈತರಿಗೆ ಹೆಚ್ಚು ನೋವುಂಟು ಮಾಡಿದೆ ಎನ್ನಬಹುದು. ಸದ್ಯ ಬೆಳೆ ನಷ್ಟದ ಚಿಂತೆಯಲ್ಲಿರುವ ರೈತರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಎದುರಾಗಿದೆ. ಹೌದು, ಕೃಷಿ ಅಗತ್ಯ ಇರುವ ಈ ವಸ್ತುವಿನ ಬೆಲೆಯಲ್ಲಿ ಏರಿಕೆ ದಾಖಲಾಗಿದೆ. ಇದರಿಂದ ರೈತರು ಮತ್ತಷ್ಟು ಆರ್ಥಿಕ ಸಮಸ್ಯೆಯನ್ನು ಎದುರಿಸಬೇಕಾಗಿದೆ.
ಬೆಲೆ ನಷ್ಟದ ಜೊತೆಗೆ ರೈತರಿಗೆ ಇನ್ನೊಂದು ಬೇಸರದ ಸುದ್ದಿ
ಇನ್ನು 2023-24ರ ಭೀಕರ ಬರದಿಂದಾಗಿ ರಾಜ್ಯದಲ್ಲಿ ಬೀಜ ಉತ್ಪಾದನೆ ಗಣನೀಯವಾಗಿ ಕುಸಿದಿದ್ದು, ಬೀಜ ಉತ್ಪಾದಕರಿಂದ ಖರೀದಿಸಿದ ಬಿತ್ತನೆ ಬೀಜಗಳ ಬೆಲೆಯೂ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ಬಿತ್ತನೆಬೀಜ ಮಾರಾಟ ಬೆಲೆ ಏರಿಕೆಯಾಗಿದೆ ಎನ್ನುವ ಬಗ್ಗೆ ಮಾಹಿತಿ ವೈರಲ್ ಆಗುತ್ತಿದೆ. ಈ ಪ್ರತಿಪಕ್ಷಗಳ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ವಸ್ತುಗಳ ದರದಲ್ಲಿ 60% ಏರಿಕೆ
ಮುಂಗಾರು ಬೆಳೆಗಳನ್ನು ಬೆಳೆಯುವ ಎಲ್ಲಾ ರಾಜ್ಯಗಳಲ್ಲಿ ಈ ಬೆಲೆ ಏರಿಕೆಯಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ಬೆಲೆ ಕಡಿಮೆ. ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸಲು ಬಿತ್ತನೆ ಬೀಜ ಖರೀದಿ ದರಗಳು ಮತ್ತು ಗರಿಷ್ಠ ಎಪಿಎಂಸಿ ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದರೆ, 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರದಲ್ಲಿ ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಿರುತ್ತದೆ. ರೈತರು ತಮ್ಮ ಹೊಲಗಳಲ್ಲಿ ಬೀಜಗಳನ್ನು ಉತ್ಪಾದಿಸುತ್ತಾರೆ.
ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ, ರಾಷ್ಟ್ರೀಯ ರಾಜ್ಯ ಬೀಜ ನಿಗಮ, ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಸಾಮಾನ್ಯ ಮಂಡಳಿ ಮತ್ತು ಖಾಸಗಿ ಸಂಸ್ಥೆಗಳು ಕೈಗೆತ್ತಿಕೊಂಡಿವೆ ಮತ್ತು ಪೂರೈಸುತ್ತವೆ. ಈ ಬಾರಿ ಹೆಸರು ಬೆಳೆ ಬಿತ್ತನೆಯ ಎಲ್-1 ದರ ಶೇ.48.5, ಉದ್ದು ಬೆಳೆ ಶೇ.37.72, ವಿವಿಧ ತಳಿಯ ತೊಗರಿ ಬೆಳೆ ಬಿತ್ತನೆ ಪ್ರಮಾಣ ಶೇ.28.29ರಿಂದ 37.69 ಹಾಗೂ ಎಲ್-1 ದರ ಶೇ. ಜೋಳದ ಬೆಳೆ ಶೇ.7.66ರಿಂದ ಶೇ.33.33ರಷ್ಟು ಹೆಚ್ಚಾಗಿದೆ. ಗಮನಾರ್ಹ ಅಂಶವೆಂದರೆ ಬೀಜಗಳ ಖರೀದಿ ಬೆಲೆಯಲ್ಲಿನ ಹೆಚ್ಚಳದ ಪ್ರಮಾಣವನ್ನು ಬೀಜ ಉತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾಯಿಸಲಾಗುತ್ತದೆ. ಇದಲ್ಲದೇ ಕೆಲ ಬಿತ್ತನೆಬೀಜಗಳ ಬೆಲೆಯಲ್ಲಿ ಇಳಿಕೆಯಾಗಿದ್ದು, ಯಥಾಸ್ಥಿತಿ ನಿರ್ಮಾಣವಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…
PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…
Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…
Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…
July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…
7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…