Twitter Account: ನೀವು ಸಿಎಂ ಸಿದ್ದರಾಮಯ್ಯ ಅವರ ಬಳಿ ದೂರು ಕೊಡಬೇಕಾ, ಈ ಕೆಲಸ ಮಾಡಿ ನೇರವಾಗಿ CM ಗೆ ದೂರು ನೀಡಿ.
ಜನರ ಸಮಸ್ಯೆಯನ್ನು ಮುಖ್ಯಮಂತ್ರಿ ಅವರ ಬಳಿ ತಲುಪಿಸಲು ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಹೊಸ ಸೌಲಭ್ಯ ಬಿಡುಗಡೆ ಆಗಲಿದೆ.
CM Siddaramaiah New Twitter Account: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯದ ಜನತೆಯ ಒಳಿತಿಗಾಗಿ ಅನೇಕ ಸೌಲಭ್ಯವನ್ನು ಒದಗಿಸುತ್ತಿದ್ದಾರೆ. ಇನ್ನು ರಾಜ್ಯದ ಜನತೆಗಾಗಿ ಐದು ಭರವಸೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿ ಈ ವರ್ಷದ ಹಣಕಾಸು ವರ್ಷದಲ್ಲಿಯೇ ಐದು ಯೋಜನೆಗಳ ಅನುಷ್ಠಾನ ಮಾಡುವ ಕುರಿತು ಘೋಷಣೆ ಹೊರಡಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಲ್ಲಿದ್ದು ರಾಜ್ಯದ ಮಹಿಳೆಯರು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಇನ್ನು ನಾಲ್ಕು ಯೋಜನೆಗಳ ಅನುಷ್ಠಾನದ ಕುರಿತು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಯೋಜನೆಗಳ ಅನುಷ್ಠಾನದ ಜೊತೆಗೆ ಇದೀಗ ರಾಜ್ಯದ ಜನತೆಗೆ ನೆರವಾಗಲು ಸಿದ್ದರಾಮಯ್ಯ ಸರ್ಕಾರ ಹೊಸ ಸೌಲಭ್ಯವನ್ನು ನೀಡಲಿದೆ.
![A new Twitter account for public issues](https://nadunudi.in/wp-content/uploads/2023/07/cm-siddaramaiah-twitter-account.png)
ಸಾರ್ವಜನಿಕರ ಸಮಸ್ಯೆಗೆ ನೆರವಾಗಲಿದ್ದಾರೆ ಸಿದ್ದರಾಮಯ್ಯ
ಇದೀಗ ರಾಜ್ಯದ ಜನರ ಸಮಸ್ಯೆಗಳನ್ನು ನಿವಾರಿಸಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಜನರ ಸಮಸ್ಯೆಯನ್ನು ಮುಖ್ಯಮಂತ್ರಿ ಅವರ ಬಳಿ ತಲುಪಿಸಲು ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಹೊಸ ಸೌಲಭ್ಯ ಬಿಡುಗಡೆ ಆಗಲಿದೆ. ಜನರ ಸಮಸ್ಯೆಯನ್ನು ಹೇಳಿಕೊಳ್ಳಲು ಪ್ರತ್ಯೇಕ ಸಾಮಾಜಿಕ ಜಾಲತಾಣದ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಲಿಂಕ್ ನ ಮೂಲಕ ಜನರು ತಮ್ಮ ಕಷ್ಟವನ್ನು ಹೇಳಿಕೊಳ್ಳಬಹುದಾಗಿದೆ.
ಈ ಕೆಲಸ ಮಾಡಿ ನೇರವಾಗಿ CM ಗೆ ದೂರು ನೀಡಬಹುದು
ಸಾರ್ವಜನಿಕರ ಕುಂದು ಕೊರತೆಯನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯುವ ಬಗ್ಗೆ ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಮಾಹಿತಿ ಬಿಡುಗಡೆ ಆಗಿದೆ.
![A new Twitter account for public issues](https://nadunudi.in/wp-content/uploads/2023/07/twitter-account.png)
ಸಾರ್ವಜನಿಕರ ಸಮಸ್ಯೆಗಾಗಿ ಹೊಸ ಟ್ವಿಟರ್ ಖಾತೆ
ಇನ್ನು https://twitter.com/osd_cmkarnataka ಈ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಟ್ಯಾಗ್ ಮಾಡಿಕೊಳ್ಳಬಹುದಾಗಿದೆ.
ಸಾರ್ವಜನಿಕರ ಸಮಸ್ಯೆಯನ್ನು ಕಚೇರಿ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಜನತೆಗೆ ಈ ಸೌಲಭ್ಯವನ್ನು ನೀಡಲಾಗುತ್ತಿದೆ. ಈ ಲಿಂಕ್ ನ ಮೂಲಕ ಇನ್ನುಮುಂದೆ ನಿಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ.