Parvathi Siddaramaiah: ದಿಢೀರನೆ ಮಣಿಪಾಲ ಆಸ್ಪತ್ರೆಗೆ ದಾಖಲಾದ ಸಿದ್ದರಾಮಯ್ಯ ಪತ್ನಿ, ಆಸ್ಪತ್ರೆಗೆ ತೆರಳಿದ ಸಿಎಂ.
ಮುಖ್ಯಮಂತ್ರಿ ಸಿ.ಎಂ ಸಿದ್ದರಾಮಯ್ಯ ಅವರ ಪತ್ನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು
Siddaramaiah Wife Parvathi Hospitalized: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಿದ್ದರಾಮಯ್ಯ (Siddaramaiah) ಅವರು ಹಲವು ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಬಹುದು. ಗ್ಯಾರೆಂಟಿ ಈಡೇರಿಕೆಯ ಸಲುವಾಗಿ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚು ಹೆಚ್ಚು ಸಭೆಗಳನ್ನು ನಡೆಸುತ್ತಿದ್ದಾರೆ.
ಈ ಮೂಲಕ ಒಂದೊಂದೇ ಗ್ಯಾರೆಂಟಿ ಯೋಜನೆಗಳು ಹೊರ ಬರುತ್ತಿವೆ. ಸಿಎಂ ಹಲವು ಕೆಲಸದ ನಡುವೆಯೂ ಬ್ಯುಸಿ ಇರುವ ಹಿನ್ನಲೆಯಲ್ಲಿ ಅವರ ಪತ್ನಿಗೆ ಅನಾರೋಗ್ಯದ ಸಮಸ್ಯೆ ಬಂದಿದೆ.
![Siddaramaiah Wife Parvathi Health](https://nadunudi.in/wp-content/uploads/2023/06/c-m-siddaramaiah-wife.png)
ಕರ್ನಾಟಕದ ಮುಖ್ಯಮಂತ್ರಿ ಸಿ.ಎಂ ಸಿದ್ದರಾಮಯ್ಯ ಅವರ ಪತ್ನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತೀ ಅವರನ್ನು ನಿನ್ನೆ ರಾತ್ರಿ 11:30 ಕ್ಕೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಸ್ಪತ್ರೆಗೆ ದಾಖಲಾದ ಸಿದ್ದರಾಮಯ್ಯ ಪತ್ನಿ
ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಜ್ವರ ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ದೆಹಲಿ ಪ್ರವಾಸ ಸಮಯ ಬದಲಾವಣೆ ಮಾಡಲಾಗಿದೆ. ಮುಖ್ಯಮಂತ್ರಿಗಳು ಇಂದು ಬೆಳಗ್ಗೆ 9.50 ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಆದರೆ ಪತ್ನಿಯ ಆರೋಗ್ಯ ಸಮಸ್ಯೆಯಿಂದಾಗಿ ಈಗ 11:30 ಕ್ಕೆ ಹೆಚ್ ಏ ಎಲ್ ನಿಂದ ವಿಶೇಷ ವಿಮಾನ ಮೂಲಕ ದೆಹಲಿಗೆ ತೆರಳಿದ್ದಾರೆ.
![Siddaramaiah Wife Parvathi Health](https://nadunudi.in/wp-content/uploads/2023/06/c-m-siddaramaiah-wife-parvthi.png)
ಇನ್ನು ದೆಹಲಿಗೆ ತೆರಳುವ ಮುನ್ನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಲಿದ್ದಾರೆ. ಆರೋಗ್ಯ ವಿಚಾರಿಸಿದ ಬಳಿಕ ದೆಹಲಿಯತ್ತ ಸಿಎಂ ತೆರಳಲಿದ್ದಾರೆ.
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಈಗ ಚೇತರಿಸಿಕೊಂಡಿದ್ದಾರೆ ಅನ್ನುವ ಸುದ್ದಿ ಹೊರ ಬಿದ್ದಿದೆ. ಈಗ ಅವರು ವಿಶ್ರಾಂತಿಯಲ್ಲಿದ್ದಾರಂತೆ. ಇಂದು ದೆಹಲಿಗೆ ತೆರಳಿರುವ ಮುಖ್ಯಮಂತ್ರಿಗಳು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಗ್ಯಾರೆಂಟಿ ಯೋಜನೆ ಈಡೇರಿಕೆ ಮತ್ತು ಲೋಕಸಭಾ ಚುನಾವಣಾ ತಯಾರಿ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.