Salary Hike: ಸರ್ಕಾರೀ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸಿದ್ದರಾಮಯ್ಯ, 15% ವೇತನ ಹೆಚ್ಚಳ ಮಾಡಿದ ಸರ್ಕಾರ.
ರಾಜ್ಯದ ಸಾರಿಗೆ ಸಿಬ್ಬಂದಿಗಳ ವೇತನದಲ್ಲಿ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ.
Congress Government Hike Salary In Karnataka: ರಾಜ್ಯ ಸರ್ಕಾರದಿಂದ ಹೊಸ ಹೊಸ ನಿಯಮಗಳು ಜಾರಿಗೆ ಆಗುತ್ತಿದೆ. ರಾಜ್ಯದಲ್ಲಿ ಇದೀಗ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದಿದ್ದು, ಸರ್ಕಾರ ಹೊಸ ಹೊಸ ನಿಯಮಗಳನ್ನು ಹೊರ ತರುತ್ತಿದೆ. ಈಗಾಗಲೇ ರಾಜ್ಯ ಸರ್ಕಾರಿ ನೌಕರರು ಏನ್ ಪಿ ಎಸ್ ರದ್ದುಗೊಳಿಸಿ, ಒಪಿಎಸ್ ಜಾರಿಗೊಳಿಸುವ ಬಗ್ಗೆ ಸರ್ಕಾರಕೆ ಮನವಿ ಮಾಡಿದ್ದಾರೆ. ಆ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ.
ಕಾಂಗ್ರೆಸ್ (Congress) ಸರ್ಕಾರ ಐದು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಜನಸಾಮಾನ್ಯರು ಯೋಜನೆಯ ಲಾಭ ಪಡೆಯಲು ಕಾಯುತ್ತಿದ್ದಾರೆ. ಇನ್ನು ಗೃಹಜ್ಯೋತಿ ಯೋಜನೆಯ ಕುರಿತು ಈಗಾಗಲೇ ಸಾಕಷ್ಟು ಅಪ್ಡೇಟ್ ಗಳು ಬಂದಿದೆ. ಇನ್ನು ಈ ನಡುವೆ ಸರ್ಕಾರ ಸಾರಿಗೆ ಸಿಬ್ಬಂದಿಗೆ ವೇತನ ಹೆಚ್ಚಳದಲ್ಲಿ ಸಿಹಿ ಸುದ್ದಿ ನೀಡಿದೆ.
![Sweet news from the state government for the transport staff](https://nadunudi.in/wp-content/uploads/2023/06/transport-staff-salary-hike.png)
ರಾಜ್ಯದ ಸಾರಿಗೆ ಸಿಬ್ಬಂಧಿಗೆ ಸಿಹಿಸುದ್ದಿ ನೀಡಿದ ಸಿದ್ದರಾಮಯ್ಯ
ಇದೀಗ ಸರ್ಕಾರದಿಂದ ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿ ಎನ್ನುವಂತೆ ಶೇಕಡಾ 15 ರಷ್ಟು ವೇತನ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ಅನುಮೋಧನೆ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಂಪುಟ ಸಭೆ ನಡೆದಿದೆ.
ವಿಧಾನಸೌಧದದಲ್ಲಿ ನಡೆದಂತ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮತಾಂತರ ನಿಷೇಧ ಕಾಯ್ದೆ ರದ್ದು, ಎಪಿಎಂಸಿ ಕಾಯ್ದೆ ರದ್ದು ಸೇರಿದಂತೆ ಹಲವು ನಿರ್ಧಾಗಳಿಗೆ ಒಪ್ಪಿಗೆ ಸೂಚಿಸಲಾಗಿದೆ.
![Sweet news from the state government for the transport staff](https://nadunudi.in/wp-content/uploads/2023/06/state-transport.png)
ಸಾರಿಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ
ಸಾರಿಗೆ ಸಿಬ್ಬಂದಿಗಳ ವೇತನವನ್ನು ಶೇಕಡಾ 15 ಅಷ್ಟು ಹೆಚ್ಚು ಮಾಡಲು ಇಂದು ನಡೆದಂತ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಅನುಮೊದನೆ ನೀಡಿದೆ.
ಹೀಗಾಗಿ ಏಪ್ರಿಲ್ ತಿಂಗಳಿನಿಂದ ಪೂರ್ವಾನ್ವಯ ಆಗುವಂತೆ ಸಾರಿಗೆ ನೌಕಕರರಿಗೆ ಶೇಕಡಾ 15 ರಷ್ಟು ವೇತನ ಹೆಚ್ಚಳವಾಗಲಿದೆ. ಈ ಮೂಲಕ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದಂತ ಸಾರಿಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.