Image Credit: Original Source
Team India Dance Video Viral: ಜೂನ್ 29 ಶನಿವಾರ ನಡೆದ India ಮತ್ತು South Africa ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಸತತ 17 ವರ್ಷಗಳ ಬಳಿಕ ವಿಶ್ವ ಚಾಂಪಿಯನ್ ಆದ ಟೀಮ್ ಇಂಡಿಯಾ ಭರ್ಜರಿಯಾಗಿ ತಮ್ಮ ಜಯವನ್ನು ಸಂಭ್ರಮಿಸಿದೆ. ಇಡೀ ಭಾರತೀಯರು ಇಂಡಿಯಾ ಗೆಲುವಿನ ಖುಷಿಯಲ್ಲಿದ್ದಾರೆ ಎನ್ನಬಹುದು.
ಇನ್ನು ಟೀಮ್ ಇಂಡಿಯಾಗೆ ಪಂದ್ಯ ಮುಗಿದ ತಕ್ಷಣ ಬಾರ್ಬಡೋಸ್ ನಿಂದ ಇಂಡಿಯಾಗೆ ಮರಳು ಸಾಧ್ಯವಾಗಲಿಲ್ಲ. ಬಾರ್ಬಡೋಸ್ ನಲ್ಲಿ ಭೀಕರ ಚಂಡಮಾರುತ ಕಾರಣ ತಾಯ್ನಾಡನಲ್ಲಿ ಗೆಲುವಿನ ಸಂಭ್ರಮಾಚರಣೆ ಮಾಡಲು ಇಂಡಿಯಾಗೆ ಸಾಧ್ಯವಾಗಲಿಲ್ಲ. ಆದರೆ ಇದೀಗ ಟೀಮ್ ಇಂಡಿಯಾ ಗುರುವಾರ (July 4 ) ಬೆಳಿಗ್ಗೆ ಭಾರತಕ್ಕೆ ಮರಳಿದೆ. ಸದ್ಯ ತಾಯ್ನಾಡಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಗೆಲುವಿನ ಖುಷಿಯಲ್ಲಿ ಹೆಜ್ಜೆ ಹಾಕಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದೆ.
ಭಾರತಕ್ಕೆ ಬಂದು ಕುಣಿದು ಕುಪ್ಪಳಿದ ರೋಹಿತ್
ತಾಯ್ನಾಡಿಗೆ ಪ್ರವೇಶಿಸಿದ ರೋಹಿತ್ ಪಡೆಗೆ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಪ್ರೇಕ್ಷಕರು ಭವ್ಯ ಸ್ವಾಗತ ನೀಡಿದರು. ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್ ತಮಟೆ ಡೋಲಿನ ಸದ್ದಿಗೆ ವಿಶ್ವಕಪ್ ಟ್ರೋಫಿಯನ್ನು ಕೈಯಲ್ಲಿ ಹಿಡಿದು ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ರೋಹಿತ್ ಶರ್ಮಾ ತನ್ನ ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ವಿಶ್ವಕಪ್ ತೋರಿಸಿದರು. ಚಪ್ಪಾಳೆ ತಟ್ಟಿ ಸ್ವಾಗತ ಕೋರುತ್ತಿದ್ದವನ ಜೊತೆ ಒಂದೆರೆಡು ಹೆಜ್ಜೆ ಹಾಕಿ ಸಂಭ್ರಮಿಸಿದರು. ತಂಟೆ ಹೊಡೆಯುತ್ತಿರುವವರು ಕೂಡ ರೋಹಿತ್ ಗೆ ಬೆಂಬಲ ನೀಡಿದರು. ನಾಯಕನ ಡ್ಯಾನ್ಸ್ ನೋಡಿ ಉಪನಾಯಕ ಹಾರ್ದಿಕ್ ಪಾಂಡ್ಯ ಹಾಗೂ ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ಯಾವುದಕ್ಕೂ ಕಮ್ಮಿ ಇಲ್ಲ ಎಂಬಂತೆ ಡ್ಯಾನ್ಸ್ ಮಾಡಿದ್ದಾರೆ.
ವಿರಾಟ್ ಮತ್ತು SKY, ವಿಡಿಯೋ ವೈರಲ್
ಗೆಲುವಿನ ಖುಷಿಯಲ್ಲಿ ಟೀಮ್ ಇಂಡಿಯಾ ಆಟಗಾರರು ಮಾಡಿದ ಡಾನ್ಸ್ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಸದ್ದು ಮಾಡುತ್ತಿದೆ. ಸುಮಾರು 18 ಗಂಟೆಗಳ ಸುದೀರ್ಘ ಪ್ರಯಾಣದ ನಂತರ, ತಂಡವು ಅಂತಿಮವಾಗಿ ಭಾರತಕ್ಕೆ ಬಂದಿಳಿಯಿತು. ತಂಡ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ವಿಶ್ವಕಪ್ ಟ್ರೋಫಿಯ ಆಕಾರದ ಕೇಕ್ ಕತ್ತರಿಸಲಾಯಿತು. ಇದೇ ವೇಳೆ ಕೊಹ್ಲಿ ಕುಟುಂಬಸ್ಥರು ಕೂಡ ಹಾಜರಿದ್ದರು.
ಇನ್ನು ನರೇಂದ್ರ ಮೋದಿ ಅವರು ಭಾರತೀಯ ಕ್ರಿಕೆಟ್ ತಂಡದ ಆಟಗಾರರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಅವರೊಂದಿಗೆ ಉಪಹಾರ ಸೇವಿಸಲಿದ್ದಾರೆ. ಇದೇ ವೇಳೆ ಮೋದಿ ಆಟಗಾರರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಮೋದಿ ಭೇಟಿ ಬಳಿಕ ಹೊಸದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ಮುಂಬೈಗೆ ಆಗಮಿಸಲಿರುವ ಆಟಗಾರರು, ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಯಕ ರೋಹಿತ್ ಶರ್ಮಾ ಗೆದ್ದ ವಿಶ್ವಕಪ್ ಟ್ರೋಫಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಹಸ್ತಾಂತರಿಸಲಿದ್ದಾರೆ.
Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…
Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…
Darshan Case New Update: ಸದ್ಯ ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…
Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…
Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…
New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…