ಕ್ರಿಕೆಟ್ ಅಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ ಕ್ರಿಕೆಟ್ ವೀಕ್ಷಣೆಯನ್ನ ಎಲ್ಲ ದೇಶದಲ್ಲಿ ಮಾಡುತ್ತಾರೆ ಎಂದು ಹೇಳಬಹುದು. ಇನ್ನು ಒಬ್ಬ ನಟನಿಗಿಂತ ಹೆಚ್ಚಾಗಿ ಒಬ್ಬ ಕ್ರಿಕೆಟ್ ಆಟಗಾರನಿಗೆ ಹೆಚ್ಚಿನ ಅಭಿಮಾನಿಗಳು ಇರುತ್ತಾರೆ ಎಂದು ಹೇಳಬಹುದು. ಒಬ್ಬ ಆಟಗಾರ ತನ್ನ ಸಾಮರ್ಥ್ಯದ ಮೂಲಕ ದೇಶದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿ ಅಪಾರವಾದ ಅಭಿಮಾನಿ ಬಳಗವನ್ನ ಗಳಿಸಿಕೊಳ್ಳಬಹುದು ಎಂದು ಹೇಳಬಹುದು. ಇನ್ನು ನಮ್ಮ ದೇಶದ ಕ್ರಿಕೆಟ್ ತಂಡ ಯಾವ ಮಟ್ಟದಲ್ಲಿ ಇದೆ ಅನ್ನುವುದು ಅನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ ಆಗಿದೆ ಎಂದು ಹೇಳಬಹುದು. ಇತರೆ ದೇಶದ ಕ್ರಿಕೆಟ್ ತಂಡಗಳಿಗೆ ಹೋಲಿಕೆ ಮಾಡಿದರೆ ನಮ್ಮ ದೇಶದ ಕ್ರಿಕೆಟ್ ತಂಡದ ಆಟಗಾರರ ಸಾಮರ್ಥ್ಯ ಎಲ್ಲರಿಗಿಂತ ಜಾಸ್ತಿ ಎಂದು ಹೇಳಬಹುದು.
ದೇಶದಲ್ಲಿ ಬಹಳ ಒಳ್ಳೆಯ ಆಟಗಾರರು ಇದ್ದು ಭಾರತ ತಂಡವನ್ನ ಒಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ವಿಷಯಕ್ಕೆ ಬರುವುದಾದರೆ ಈ ಭಾರಿ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನ ಗೆದ್ದ ವಿಷಯ ಎಲ್ಲರಿಗೂ ತಿಳಿದಿದೆ ಎಂದು ಹೆಕೆಳಬಹುದು. ಬಹಳ ಪೈಪೋಟಿಯಲ್ಲಿ ಇದ್ದ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡವನ್ನ ಸರಣಿಯಲ್ಲಿ ಸೋಲಿಸಿದ್ದು ಈ ಪಂದ್ಯದಲ್ಲಿ ಯುವ ಆಟಗಾರರು ತಮ್ಮ ಸಾಮರ್ಥ್ಯವನ್ನ ತೋರಿಸಿದ್ದಾರೆ ಎಂದು ಹೇಳಬಹುದು.
ಇನ್ನು ಸರಣಿ ಗೆಲ್ಲುವಲ್ಲಿ ಪ್ರಮುಖ ಸ್ಥಾನವನ್ನ ವಹಿಸಿದ ಯುವ ಆಟಗಾರರಿಗೆ ಈಗ ಬಂಪರ್ ಉಡುಗೊರೆ ಬಂದಿದ್ದು ಈ ಉಡುಗೊರೆಗಳ ಬೆಲೆ ಕೇಳಿದರೆ ನಿಮಗೆ ಶಾಕ್ ಆಗುವುದು ಗ್ಯಾರೆಂಟಿ ಎಂದು ಹೇಳಬಹುದು. ಹಾಗಾದರೆ ಈ ಉಡುಗೊರೆಗಳ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಆಟಗಾರರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಭಾರತೀಯ ತಂಡದ ಯುವ ಆಟಗಾರರಾದ ನಟರಾಜನ್ ಮತ್ತು ಶಾರ್ದೂಲ್ ಠಾಕೂರ್ ಅವರಿಗೆ ಮಹೇಂದ್ರ ಕಂಪನಿಯ ಥಾರ್ ಕಾರನ್ನು ಗಿಫ್ಟ್ ಆಗಿ ನೀಡಲಾಗಿದೆ.
ಮಹೇಂದ್ರ ಕಂಪನಿಯ ಮುಖ್ಯಸ್ಥರಾದ ಆನಂದ್ ಮಹೀಂದ್ರಾ ಅವರು ಥಾರ್ ಕಾರನ್ನು ನಟರಾಜನ್ ಮತ್ತು ಶಾರ್ದೂಲ್ ಠಾಕೂರ್ ಅವರಿಗೆ ಗಿಫ್ಟ್ ಆಗಿ ನೀಡಿದ್ದಾರೆ. ಮಹೀಂದ್ರಾ ಕಂಪನಿಯ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಥಾರ್ ಎಸ್ಯುವಿಯನ್ನು ಗಿಫ್ಟ್ ನೀಡಲಾಗುವುದು ಎಂದು ಹೇಳಿದ್ದರು. ಈಗ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಇನ್ನು ಈ ಕಾರಿನ ಬೆಲೆಯ ವಿಷಯಕ್ಕೆ ಬರುವುದಾದರೆ, ಮಹೇಂದ್ರ ಥಾರ್ ಕಾರಿನ ಇಂದಿನ ಮಾರುಕಟ್ಟೆ ಬೆಲೆ ಬರೋಬ್ಬರಿ 18 ಲಕ್ಷ ರೂಪಾಯಿ ಆಗಿದೆ.
ಆಸ್ಟ್ರೇಲಿಯಾ ತಂಡದ ವಿರುದ್ಧ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 2-1 ರ ಮೂಲಕ ಭರ್ಜರಿ ಗೆಲುವನ್ನ ಸಾಧಿಸಿತ್ತು ಮತ್ತು ಗೆಲುವಿನಲ್ಲಿ ನಟರಾಜನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್ ಮತ್ತು ನವದೀಪ್ ಸೈನಿ ಅವರು ಪ್ರಮುಖ ಪಾತ್ರವನ್ನ ವಹಿಸಿದ್ದರು, ಆ ಸಮಯದಲ್ಲಿ ಉಡುಗೊರೆಯಾಗಿ ತಮ್ಮ ಖರ್ಚಿನಲ್ಲಿ ಹೊಸ ಮಹೀಂದ್ರಾ ಥಾರ್ ಎಸ್ಯುವಿ ಉಡುಗೊರೆಯಾಗಿ ಕೊಡುವುದಾಗಿ ಹೇಳಿಕೊಂಡಿದ್ದರು. ಸದ್ಯ ಈ ಇಬ್ಬರಿಗೆ ಕರುಗಳನ್ನ ನೀಡಲಾಗಿದ್ದು ಇನ್ನೆಕು ಕೆಲವೇ ದಿನಗಳಲ್ಲಿ ಉಳಿದವರಿಗೂ ಕೂಡ ಕಾರುಗಳನ್ನ ಉಡುಗೊರೆಯಾಗಿ ನೀಡಲಾಗುತ್ತದೆ. ಇಬ್ಬರು ಆಟಗಾರರು ಉಡುಗೊರೆ ನೀಡಿದ್ದಾರೆ ಮಹೇಂದ್ರ ಅವರಿಗೆ ಧನ್ಯವಾದವನ್ನ ಹೇಳಿದ್ದಾರೆ.