The Kerala Story: ದಿ ಕೇರಳ ಚಿತ್ರವನ್ನ ಯಾಕೆ ನಿಷೇಧ ಮಾಡಲಾಗಿದೆ, ಸುಪ್ರೀಂ ಕೋರ್ಟ್ ಪ್ರಶ್ನೆ ಉತ್ತರಿಸಿದ ತಮಿಳುನಾಡು ಸರ್ಕಾರ.
ತಮಿಳುನಾಡಿನಲ್ಲಿ ದಿ ಕೇರಳ ಸ್ಟೋರಿ ಚಿತ್ರವನ್ನ ಯಾಕೆ ಬ್ಯಾನ್ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಈಗ ಪ್ರಶ್ನೆಯನ್ನ ಮಾಡಿದೆ.
The Kerala Story Controversy: ದಿ ಕೇರಳ ಸ್ಟೋರಿ (The Kerala Story) ಸಿನಿಮಾ ಈಗಾಗಲೇ ದೇಶಾದ್ಯಂತ ರಿಲೀಸ್ ಆಗಿದೆ. ಹಿಂದಿ, ತಮಿಳು, ಮಲಯಾಳಂ, ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ಮೂಡಿ ಬಂದಿದ್ದು ಸಾಕಷ್ಟು ಜನರು ಈ ಸಿನಿಮಾ ನೋಡಿ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನು ಈ ಸಿನಿಮಾ ವಿವಾದದ ಮದ್ಯೆ ಸಿಲುಕಿಕೊಂಡಿದ್ದರು ದಾಖಲೆಯ ಕಲೆಕ್ಷನ್ ಮಾಡಿದೆ. ಇನ್ನು ಈ ಸಿನಿಮಾ ವಿವಾದದಿಂದ ಸಾಕಷ್ಟು ಚಿತ್ರಮಂದಿರದಲ್ಲಿ ರಿಲೀಸ್ ಆಗಿಲ್ಲ.
![The Kerala Story Controversy](https://nadunudi.in/wp-content/uploads/2023/05/The-Kerala-Story-Controversy.png)
ವಿವಾದಕ್ಕೆ ಒಳಗಾದ ದಿ ಕೇರಳ ಸ್ಟೋರಿ ಸಿನಿಮಾ
ಇನ್ನು ಹಲವು ರಾಜ್ಯದಲ್ಲಿ ದಿ ಕೇರಳ ಸ್ಟೋರಿ ಚಿತ್ರಕ್ಕೆ ನಿಷೇಧದ ಭೀತಿ ಎದುರಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಚಿತ್ರವನ್ನ ನೋಡಿದ ಸಾಕಷ್ಟು ಜನರು ಚಿತ್ರಕ್ಕೆ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ. ಹಲವು ರಾಜ್ಯಗಳು ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನ ಕೂಡ ಘೋಷಣೆ ಮಾಡಿದ್ದು ಇದು ಚಿತ್ರದ ಯಶಸ್ಸಿಗೆ ಕಾರಣವಾಗಿದೆ.
![The Kerala Story Controversy](https://nadunudi.in/wp-content/uploads/2023/05/The-Kerala-Story-Controversy-1.png)
ಸುಪ್ರೀಂ ಕೋರ್ಟ್ ಪ್ರಶ್ನೆಗೆ ಉತ್ತರಿಸಿದ ತಮಿಳುನಾಡು ಸರ್ಕಾರ
ಇನ್ನು ದಿ ಕೇರಳ ಸ್ಟೋರಿ ಸಿನಿಮಾ ಬಿಡುಗಡೆಯಾಗಿ ಎರಡು ದಿನ ಕಳೆದರು ಸಹ ತಮಿಳುನಾಡಿನಲ್ಲಿ ಈ ಸಿನಿಮಾ ನೋಡಲು ಯಾರು ಬರುತ್ತಿಲ್ಲ ಎಂಬ ಕಾರಣಕ್ಕೆ ರಾಜ್ಯಾದ್ಯಂತ ಥಿಯೇಟರ್ ಮಾಲೀಕರು ಈ ಕ್ರಮಕ್ಕೆ ಬಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ನೋಟಿಸ್ಗೆ ತಮಿಳುನಾಡು ಸರ್ಕಾರ ಉತ್ತರಿಸಿದೆ.
ಮಲ್ಟಿಪ್ಲೆಕ್ಸ್ ಮಾಲೀಕರು ಮೇ 7 ರಿಂದ ಚಿತ್ರ ಪ್ರದರ್ಶನವನ್ನು ನಿಲ್ಲಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಇದಕ್ಕೆ ಕಾರಣ ಪ್ರಸಿದ್ಧ ನಟರ ಕೊರತೆ, ಕಳಪೆ ಪ್ರದರ್ಶನ ಮತ್ತು ಹೆಚ್ಚಾಗಿ ಈ ಚಿತ್ರವನ್ನು ನೋಡಲು ಜನರೇ ಇರಲಿಲ್ಲ ಎಂದು ತಮಿಳುನಾಡು ಸರ್ಕಾರ ಪತ್ರದಲ್ಲಿ ಉತ್ತರಿಸಿದೆ. ಜತೆಗೆ ಇದು ಹಿಂದಿ ಭಾಷೆಯಲ್ಲಿ ಮೇ 5ರಂದು 19 ಮಲ್ಟಿಪ್ಲೆಕ್ಸ್ಗಳಲ್ಲಿ ಬಿಡುಗಡೆಯಾಗಿದೆ ಎಂದು ಹೇಳಿದೆ.
![The Kerala Story Controversy](https://nadunudi.in/wp-content/uploads/2023/05/The-Kerala-Story-Controversy-2.png)
ದಿ ಕೇರಳ ಸ್ಟೋರಿ ಚಿತ್ರದಲ್ಲಿ ಯಾವುದೇ ಜನಪ್ರಿಯ ನಟರು ಇಲ್ಲ ಅದಕ್ಕಾಗಿ ಕಳಪೆ ಪ್ರದರ್ಶನಗೊಂಡು ಬಾಕ್ಸ್ ಆಫೀಸ್ಗೆ ಭಾರೀ ತೊಂದರೆಯಾಗಿದೆ ಎಂದು ಹೇಳಿದೆ. ಇದರ ಜತೆಗೆ ಈ ಸಿನಿಮಾವನ್ನು ನೋಡಲು ಅಷ್ಟೊಂದು ಜನ ಬಂದಿಲ್ಲ ಎಂದು ಸ್ವತಃ ಚಲನಚಿತ್ರ ಪ್ರದರ್ಶಕರೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಇನ್ನೂ ಈ ಸಿನಿಮಾ ನೋಡು ಜನ ಬರಬೇಕು ಎಂದು ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.