Image Source: India Today
These Document Is Mandatory For Yuva Nidhi: ಇನ್ನು 2022 -23 ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಇಲ್ಲದವರಿಗೆ ರಾಜ್ಯ ಸರ್ಕಾರದ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ವಿಧಾನಸಭಾ ಚುನವಣಾ ಸಮಯದಲ್ಲಿ ಘೋಷಣೆಯಾಗಿದ್ದ Yuva Nidhi ಯೋಜನೆ ಎಂಟು ತಿಂಗಳ ನಂತರ ಅನುಷ್ಠಾನಗೊಂಡಿದೆ.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಯುವ ನಿಧಿ ಕೊನೆಯದಾಗಿ ಅನುಷ್ಠಾನಗೊಂಡಿದೆ. ಪದವಿ ವಿದ್ಯಾರ್ಥಿಗಳಿಗೆ 3,000 ಹಾಗೂ ಡಿಪ್ಲೊಮೊ ವಿದ್ಯಾರ್ಥಿಗಳಿಗೆ 1,500 ಮಾಸಿಕ ನಿರುದ್ಯೋಗ ಭತ್ಯೆ ದೊರೆಯಲಿದೆ. ಇದೀಗ ಯುವ ನಿಧಿ ಯೋಜನೆಗೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿಯಾಗಿದೆ.
ದಿಡೀರ್ ಯುವನಿಧಿ ಯೋಜನೆ ನಿಯಮ ಬದಲಿಸಿದ ಸರ್ಕಾರದ
ಸದ್ಯ ರಾಜ್ಯ ಸರ್ಕಾರ ನಿರುದ್ಯೋಗ ಭತ್ಯೆ ಪಡೆಯುತ್ತಿರುವವರಿಗೆ ಹೊಸ ರೂಲ್ಸ್ ಜಾರಿಮಾಡಿದೆ. ಯುವ ನಿಧಿ ಯೋಜನೆಗೆ ಸರ್ಕಾರ ವಿಧಿಸಿರುವ ನಿಯಮಗಳ ಉಲ್ಲಂಘನೆ ಆಗಬಾರದು ಎನ್ನುವ ಕಾರಣದಿಂದ ಸರ್ಕಾರ ಈ ಹೊಸ ನಿಯಮವನ್ನು ಜಾರಿಗೊಳಿಸಿದೆ. ನಿರುದ್ಯೋಗ ಭತ್ಯೆ ಪಡೆಯಬೇಕಿದ್ದರೆ ಈ ನಿಯಮ ಪಾಲನೆ ಕಡ್ಡಾಯವಾಗಿದೆ. ನೀವು ಯುವ ನಿಧಿ ಯೋಜನೆಯ ಹಣವನ್ನು ಮುಂದಿನ ತಿಂಗಳು ಪಡೆಯಬೇಕಿದ್ದರೆ ಈ ದಾಖಲೆ ನೀಡುವುದು ಕಡ್ಡಾಯವಾಗಿದೆ.
ಈ ದಾಖಲೆ ಕೊಡದಿದ್ದರೆ ಬರಲ್ಲ ಹಣ
ನಿರುದ್ಯೋಗ ಭತ್ಯೆ ಪಡೆಯುವ ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಿತ ಪ್ರಮಾಣಪತ್ರವನ್ನು ಅಪ್ ಲೋಡ್ ಮಾಡಬೇಕು ಎಂದು ರಾಜ್ಯ ಸರ್ಕಾರ ಘೋಷಿಸಿದೆ. NAD (National Academy Depository) ಬಳಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಪದವೀಧರರ ಪ್ರಮಾಣಪತ್ರಗಳಿವೆ.
ಅಲ್ಲಿಂದ ಮಾಹಿತಿ ಪಡೆಯಲಾಗುತ್ತಿದೆ. ದಾಖಲೆಗಳು ತಾಳೆಯಾಗಿದ್ದು, ಫಲಿತಾಂಶ ಬಂದ ಆರು ತಿಂಗಳ ನಂತರ ಅಭ್ಯರ್ಥಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ. ಪ್ರತಿ ತಿಂಗಳು ಅಭ್ಯರ್ಥಿಗಳು ತಾವು ಉದ್ಯೋಗ ಪಡೆದಿಲ್ಲ ಮತ್ತು ಉನ್ನತ ಶಿಕ್ಷಣಕ್ಕೆ ಹೋಗಿಲ್ಲ ಎಂದು ಸ್ವಯಂ ಘೋಷಿತ ಪ್ರಮಾಣಪತ್ರವನ್ನು ಅಪ್ ಲೋಡ್ ಮಾಡಬೇಕು ಎಂದು ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ ಈ ಕುರಿತು ಹೇಳಿಕೆ ನೀಡಿದ್ದಾರೆ. ಸ್ವಯಂ ಘೋಷಿತ ಪ್ರಮಾಣಪತ್ರವನ್ನು ಅಪ್ ಲೋಡ್ ಮಾಡಿದರೆ ಮಾತ್ರ ಫಲಾನುಭವಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಸಾಧ್ಯವಾಗುತ್ತದೆ.
PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…
Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…
Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…
July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…
7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…
Mukesh Ambani Gave Marriage Invitation To Rahul Gandhi: ದೇಶದ ಶ್ರೀಮಂತ ವ್ಯಕ್ತಿಯಾದ ಮುಕೇಶ್ ಅಂಬಾನಿ ಅವರ ಕೊನೆಯ…