Tirumala Tirupati Temple Darshana Rules: ಇದೀಗ ತಿರುಪತಿ ತಿರುಮಲ ದೇವರ ದರ್ಶನಕ್ಕೆ ಹೋಗುವವರಿಗೆ ಹೊಸ ಸುದ್ದಿ ಒಂದು ಹೊರ ಬಿದ್ದಿದೆ. ತಿರುಪತಿ ತಿರುಮಲ ದೇವಸ್ಥಾನದಲ್ಲಿ ಕೆಲವು ನಿಯಮಗಳು ಜಾರಿ ಆಗಿವೆ. ಇದರ ಬಗ್ಗೆ ಮಾಹಿತಿ ತಿಳಿಯೋಣ.
ತಿರುಮಲ ತಿರುಪತಿ ದೇವಸ್ಥಾನ ಹೊಸ ನಿಯಮ
ತಿರುಮಲ ತಿರುಪತಿ ದೇವಸ್ಥಾನ ಮೂರೂ ವರ್ಷಗಳ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಿದ ನಂತರ ಬೇಸಿಗೆ ಸಂದರ್ಭದಲ್ಲಿ ಭಾರಿ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಿದ್ದು ದೇವರ ದರ್ಶನದಲ್ಲಿ ಭಾರಿ ವಿಳಂಬವಾಗುತ್ತಿದೆ.
ಇದರಿಂದ ದರ್ಶನ ನಿಯಮಗಳಲ್ಲಿ ಬದಲಾವಣೆ ಮಾಡಲು ದೇವಸ್ಥಾನ ಆಡಳಿತ ಮಂಡಳಿ ನಿರ್ಧರಿಸಿದ್ದಾರೆ. ಜೂನ್ 30 ರ ವರೆಗೆ ಹೊಸ ನಿಯಮಗಳು ಜಾರಿಯಲ್ಲಿರುತ್ತದೆ ಎಂದು ಟಿಟಿಡಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ಪ್ರಕಟಣೆಯಲ್ಲಿ ಹೇಳಿದ್ದಾರೆ.
ತಿರುಪತಿ ದೇವಸ್ಥಾನದಲ್ಲಿ ದೇವರ ದರ್ಶನದಲ್ಲಿ ಬದಲಾವಣೆ
ಇನ್ನು ಟೋಕನ್ ಇಲ್ಲದೆ ಉಚಿತ ದರ್ಶನ ಮಾಡುವ ಭಕ್ತರಿಗೆ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ದರ್ಶನ ಸಿಗಲು ಸುಮಾರು 30 ರಿಂದ 40 ಗಂಟೆಗಳ ಸಮಯ ತೆಗೆದುಕೊಳ್ಳುತ್ತಿದೆ ಎಂದು ಟಿಟಿಡಿ ಹೇಳಿದೆ. ಆದ್ದರಿಂದ ಜೂನ್ 30 ರವರೆಗೆ ವಿಐಪಿ ದರ್ಶನ ಮತ್ತು ಆರ್ಜಿತ ಸೇವೆಗಳಲ್ಲಿ ಬದಲಾವಣೆಗಳನ್ನು ಮಾಡಿದೆ.
ಹೊಸ ನಿಯಮದ ಪ್ರಕಾರ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಸುಪ್ರಭಾತ ಸೇವೆಯಲ್ಲಿನ ವಿವೇಚನಾ ಕೋಟಾವನ್ನು ಟಿಟಿಡಿ ಹಿಂಪಡೆದಿದ್ದು, ಸಾಮಾನ್ಯ ಭಕ್ತರಿಗೆ 20 ನಿಮಿಷಗಳ ಉಳಿತಾಯವಾಗಲಿದೆ.
ಶುಕ್ರವಾರ ಶನಿವಾರ ಮತ್ತು ಭಾನುವಾರದಂದು ವಿಐಪಿ ಶಿಫಾರಸು ಪತ್ರಗಳನ್ನು ಸ್ವೀಕರಿಸದಿರಲು ನಿರ್ಧರಿಸಲಾಗಿದೆ. ಆದರೆ ಸ್ವಯಂ ವಿಐಪಿಗಳಿಗೆ ಮಾತ್ರ ದರ್ಶನವನ್ನು ಅನುಮತಿಸಲಾಗಿದೆ, ಇದು ಈ ದಿನಗಳಲ್ಲಿ ಪ್ರತಿ ದಿನ 3 ಗಂಟೆಗಳ ದರ್ಶನ ಸಮಯವನ್ನು ಉಳಿಸುತ್ತದೆ ಎಂದು ಟಿಟಿಡಿ ಹೇಳಿದೆ.
ಗುರುವಾರದಂದು ಏಕಾಂತಂನಲ್ಲಿ ತಿರುಪ್ಪವಾಡ ಸೇವೆ ಮಾಡಲು ಟಿಟಿಡಿ ನಿರ್ಧರಿಸಿದೆ, ಇದರಿಂದಾಗಿ 30 ನಿಮಿಷಗಳ ಉಳಿತಾಯವಾಗುತ್ತದೆ. ಸಾಮಾನ್ಯ ಭಕ್ತರು ದೀರ್ಘಕಾಲದ ವರೆಗೆ ಸರತಿ ಸಾಲಿನಲ್ಲಿ ಕಾಯುವುದನ್ನು ತಪ್ಪಿಸಲು. ತ್ವರಿತ ಮತ್ತು ಆರಾಮದಾಯಕವಾಗಿ ದೇವರ ದರ್ಶನವನ್ನು ಮಾಡುವಂತೆ ಅವಕಾಶ ನೀಡುವ ದೃಷ್ಟಿಯಿಂದ ಈ ನಿರ್ಧಾರಗಳನ್ನು ಜಾರಿ ಮಾಡಲಾಗಿದೆ ಎಂದು ಟಿಟಿಡಿ ತಿಳಿಸಿದೆ.
Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…
Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…
Darshan Case New Update: ಸದ್ಯ ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…
Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…
Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…
New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…