Ads By Google

Tirupati Temple Close: ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವ ಭಕ್ತರಿಗೆ ಹೊಸ ನಿಯಮ, ದರ್ಶನ ಇಲ್ಲ.

Ads By Google

Tirupati Temple Close: ತಿರುಪತಿ ತಿಮ್ಮಪ್ಪನ ದೇವಸ್ಥಾನ ಸಾಕಷ್ಟು ಪ್ರಸಿದ್ದಿಯನ್ನು ಪಡೆದಿದೆ. ಬೇರೆ ಬೇರೆ ರಾಜ್ಯದ ಜನರು ತಿರುಪತಿ ವೆಂಕಟರಮಣನ ದರ್ಶನವನ್ನು ಪಡೆಯಲು ಬರುತ್ತಾರೆ. ದಿನ ನಿತ್ಯ ಸಾವಿರಾರು ಜನಸಂಖ್ಯೆಯಲ್ಲಿ ತಿಮ್ಮಪ್ಪನ ದರ್ಶನ ಪಡೆಯಲು ಭಕ್ತಾದಿಗಳು ಬರುತ್ತಾರೆ. 

ತಿರುಪತಿ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಹೊಸ ನಿಯಮ 

ತಿರುಪತಿ ವೆಂಕಟರಮಣನ (Tirupati Venkataramana) ದೇವಸ್ಥಾನದಲ್ಲಿ ದೇಗುಲದ ಆನಂದ ನಿಲಯಂ (Ananda Nilayam) ಚಿನ್ನದ ಲೇಪನವನ್ನು ಬದಲಾಯಿಸಲು ಯೋಚಿಸಿದೆ.

Image Credit: indiatvnews

ಆಂಧ್ರಪ್ರದೇಶದ (Andrapradesha) ತಿರುಪತಿ ಜಿಲ್ಲೆಯಲ್ಲಿರುವ ತಿರುಮಲ ದೇವಸ್ಥಾನದ ಮುಖ್ಯ ಗರ್ಭಗುಡಿಯನ್ನು 2023 ರಲ್ಲಿ ಆರರಿಂದ ಎಂಟು ತಿಂಗಳವರೆಗೆ ಮುಚ್ಚುವ ಸಾಧ್ಯತೆಯಿದೆ, ಭಾರತದ ಶ್ರೀಮಂತ ದೇವಾಲಯಗಳಲ್ಲಿ ಒಂದನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನ ತಿರುಪತಿ ತಿಮ್ಮಪ್ಪನ ದೇಗುಲದ ಆನಂದ ನಿಲಯಂ ನ ಚಿನ್ನದ ಲೇಪನವನ್ನು ಬದಲಾಯಿಸಲು ಯೋಜಿಸಿದೆ.

ಆನಂದ ನಿಲಯಂ ಅಂದರೆ ಗರ್ಭಗುಡಿಯ ಮೇಲಿರುವ ಮೂರು ಅಂತಸ್ತಿನ ವಿಮಾನ. ಹಾಗಾದರೆ ಈ ಸಮಯದಲ್ಲಿ ಭಕ್ತರು ತಿರುಪತಿ ತುಮ್ಮಪ್ಪನ ದರ್ಶನವನ್ನು ಪಡೆಯುವುದು ಹೇಗೆ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ.

Image Credit: indianexpress

ಇದಕ್ಕಾಗಿ, ಮುಖ್ಯ ದೇವಾಲಯದ ಪಕ್ಕದಲ್ಲಿ ತಾತ್ಕಾಲಿಕವಾಗಿ ತಿರುಪತಿ ವೆಂಕಟೇಶ್ವರ ದೇವರ ತದ್ರೂಪಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಲು ಯೋಜಿಸಲಾಗಿದೆ ಎಂದು ಟಿಟಿಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದಕ್ಕೂ ಮುನ್ನ 1958 ರಲ್ಲಿ ಆನಂದ ನಿಲಯಕ್ಕೆ ಚಿನ್ನದ ಲೇಪನ ಮಾಡಲಾಗಿತ್ತು. ಆ ಸಮಯದಲ್ಲಿ ಚಿನ್ನದ ಲೇಪನ ಮಾಡಲು ಸುಮಾರು ಎಂಟು ವರ್ಷ ಬೇಕಾಗಿತ್ತು.

ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ 

ತಿರುಮಲ ದೇಗುಲದ ಆನಂದ ನಿಲಯವನ್ನು ನವೀಕರಿಸುವ ಟಿಟಿಡಿ ಟ್ರಸ್ಟ್ ಬೋರ್ಡ್ ನ ನಿರ್ಧಾರಕ್ಕೆ ಯಾರಿಂದಲೂ ವಿರೋಧ ಬಂದಿಲ್ಲ. ಆದರೆ ಪ್ರತಿನಿತ್ಯ ಬೃಹತ್ ಸಂಖ್ಯೆಯಲ್ಲಿ ಭೇಟಿ ನೀಡುವ ಭಕ್ತರನ್ನು ನಿಭಾಯಿಸುವುದು ಹೇಗೆ, ಇಂತಹ ಸಮಯದಲ್ಲಿ ದೇಗುಲದ ನವೀಕರಣ ಹೇಗೆ ಎಂದು ಭಕ್ತರ ಕಳವಳ ವ್ಯಕ್ತಪಡಿಸಿದ್ದಾರೆ.  ಇದಕ್ಕೆ ಟಿಟಿಡಿ ಅಧಿಕಾರಿಗಳು ಪರಿಹಾರವನ್ನು ಕಂಡುಕೊಂಡಿದ್ದಾರೆ.

Image Credit: india

ಈಗಿನ ದೇಗುಲದ ಸಮೀಪದಲ್ಲಿ ತಾತ್ಕಾಲಿಕ ದೇವಾಲಯ “ಬಾಲಾಲಯʼʼ ನಿರ್ಮಿಸಲಾಗುವುದು. ಭಕ್ತರಿಗೆ ದೇವರ ದರ್ಶನಕ್ಕೆ ತಡೆಯಾಗದಂತೆ ವೆಂಕಟೇಶ್ವರ ದೇವರ ಪ್ರತಿಕೃತಿ ಮೂರ್ತಿಯನ್ನು ಸ್ಥಾಪಿಸಲಾಗುವುದು ಎಂದು ಟಿಟಿಡಿ ಅಧ್ಯಕ್ಷರಾದ ವೈವಿ ಸುಬ್ಬಾ ರೆಡ್ಡಿ ಹೇಳಿದ್ದಾರೆ.

ಚಿನ್ನದ ಲೇಪನ ಮಾಡುವ ಸಮಯದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನ ಸಿಗುದಿಲ್ಲ

ಚಿನ್ನದ ಲೇಪನ ಮಾಡುವ ಸಮಯದಲ್ಲಿ ಮುಖ್ಯ ದೇಗುಲದಲ್ಲಿ ದರ್ಶನ ಸಾಧ್ಯವಿಲ್ಲ. ಎರಡು ಕಾರಣದಿಂದಾಗಿ ಇದು ಸಾಧ್ಯವಿಲ್ಲ. ಮೊದಲನೆಯದಾಗಿ ದೇವರ ಶಕ್ತಿಯನ್ನು ಬಾಲಾಯಾಲಂಗೆ ಕೊಂಡೊಯ್ಯುವ ಕಾರಣ ಭಕ್ತರು ಮುಖ್ಯ ದೇಗುಲಕ್ಕೆ ಪ್ರವೇಶಿಸುವುದಕ್ಕೆ ಅರ್ಥವಿಲ್ಲ.

scrollImage Credit:

ಆ ಸಮಯದಲ್ಲಿ ಮೂಲ ಮೂರ್ತಿಗೆ ಯಾವುದೇ ಪ್ರಮುಖ ಪೂಜೆಗಳು, ಧಾರ್ಮಿಕ ಕ್ರಿಯೆಗಳು ನಡೆಯುವುದಿಲ್ಲ. ಎರಡನೆಯದು, ರಿಪೇರಿ ಕೆಲಸ ನಡೆಯುವ ಸಮಯದಲ್ಲಿ ಸಾವಿರಾರು ಭಕ್ತರು ದೇಗುಲ ಪ್ರವೇಶಿಸುವುದು ಸುರಕ್ಷತೆಯ ದೃಷ್ಟಿಯಿಂದ ಸರಿಯಲ್ಲ ಎಂದಿದ್ದಾರೆ.

Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: Andrapradesha tirupati temple Tirupati Temple Close tirupati temple close duw to reapir work tirupati temple history tirupati temple net worth Tirupati Temple New Rules tirupati thimmappa Tirupati Venkataramana

Recent Stories

  • Entertainment
  • Headline
  • Information
  • Main News

Darshan Case: ದರ್ಶನ್ ಗೆ ಯಾಕೆ ಜಾಮೀನು ಸಿಗುತ್ತಿಲ್ಲಾ…? ಇಲ್ಲಿದೆ ಪೊಲೀಸರು ಬಿಚ್ಚಿಟ್ಟ 14 ಕಾರಣಗಳು

Darshan Case New Update: ಸದ್ಯ  ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…

2024-07-07
  • Education
  • Headline
  • Information
  • Main News

Lakshmi Hebbalkar: ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಹೊಸ ಯೋಜನೆ ಜಾರಿ

Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…

2024-07-07
  • Entertainment
  • Headline
  • Information
  • Main News

Pavithra Gowda Friend: ಜೈಲಿನಲ್ಲಿ ದರ್ಶನ್ ಅವರನ್ನ ಭೇಟಿಯಾದ ಈ ಮಹಿಳೆ ಯಾರು ಗೊತ್ತಾ…?

Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…

2024-07-07
  • Business
  • Headline
  • Information
  • Main News
  • money
  • Regional

Pension Rule: ಪ್ರತಿ ತಿಂಗಳು ಪಿಂಚಣಿ ಹಣ ಪಡೆಯುವವರಿಗೆ ರಾತ್ರೋರಾತ್ರಿ ಹೊಸ ನಿಯಮ, ತಕ್ಷಣ ಈ ಕೆಲಸ ಮಾಡಿ.

New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…

2024-07-07
  • Business
  • Headline
  • Information
  • Main News
  • money

RBI New Rule: HDFC, Axis ಮತ್ತು Yes ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ ಹೊಸ ರೂಲ್ಸ್, RBI ಆದೇಶ.

RBI New Rule For Bank: ದೇಶದಲ್ಲಿ July 1 ರಿಂದ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಯ ನಿಯಮಗಳು ಬದಲಾಗಿವೆ.…

2024-07-07
  • Headline
  • Information
  • Main News
  • Press
  • Regional
  • Technology

Ev Ban: ಇನ್ಮುಂದೆ ಇಂತಹ ಎಲೆಕ್ಟ್ರಿಕ್ ವಾಹನಗಳನ್ನ ರಸ್ತೆಗೆ ತರುವಂತಿಲ್ಲ, ಹೊಸ ನಿಯಮ ಜಾರಿ

Ev Ban In Karnataka: ಜನಸಾಮನ್ಯರು ಸರ್ಕಾರಕ್ಕೆ ವಿವಿಧ ಬೇಡಿಕೆಯನ್ನು ಮನವಿ ಇಟ್ಟಿರುತ್ತಾರೆ. ಆದರೆ ಸರ್ಕಾರ ಜನಸಾಮನ್ಯರ ಬೇಡಿಕೆಗೆ ಹೆಚ್ಚಿನ…

2024-07-07