Image Credit: Original Source
Vijayalakshmi Clarification About Darshan And Pavitra Gowda Relationship: ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ದರ್ಶನ್ ಜಾಳು ಸೇರುತ್ತಿದ್ದಂತೆ ದರ್ಶನ್ ಹಾಗೂ ಪವಿತ್ರ ಗೌಡ ಸಂಬಂಧದ ಬಗ್ಗೆ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಎನ್ನುವುದು ಎಲ್ಲರಿಗು ತಿಳಿದಿರುವ ವಿಚಾರ. ಆದರೆ ರೇಣುಕಾಸ್ವಾಮಿ ಹತ್ಯೆ ನಡೆದ ಬಳಿಕ ಪವಿತ್ರ ಗೌಡ ಕೂಡ ದರ್ಶನ್ ಪತ್ನಿ ಎನ್ನುವ ಬಗ್ಗೆ ಮಾತುಗಳು ಕೇಳಿಬರುತ್ತಿದೆ. ಇನ್ನು ಕೆಲ ಸುದ್ದಿಗೋಷ್ಠಿಯಲ್ಲಿ ದರ್ಶನ್ ಪತ್ನಿ ಪವಿತ್ರ ಗೌಡ ಎಂದು ಕೂಡ ಉಲ್ಲೇಖಿಸಲಾಗಿದೆ.
ಇನ್ನು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರನ್ನು ಬೆಲ್ ಮೇಲೆ ಹೊರತರಲು ಪ್ರಯತ್ನಿಸುತ್ತಿದ್ದಾರೆ. ಈ ವೇಳೆ ದರ್ಶನ್ ಗೆ ಎರಡು ಪತ್ನಿ ಎನ್ನುವ ಬಗ್ಗೆ ಸುದ್ದಿ ವೈರಲ್ ಆಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಈ ಈ ಬಗ್ಗೆ ಹೇಳಿಕೆ ಬಂದಿರುವ ಹಿನ್ನಲ್ಲೆ ಪವಿತ್ರ ಗೌಡ ದರ್ಶನ್ ಅವರ ಎರಡನೇ ಪತ್ನಿನಾ…? ಎನ್ನುವ ಬಗ್ಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸ್ಪಷ್ಟನೆ ನೀಡಿದ್ದಾರೆ. ವಿಜಯಲಕ್ಷ್ಮಿ ನೀಡಿರುವ ಸ್ಪಷ್ಟನೆ ಏನು ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.
ಪವಿತ್ರ ಗೌಡ ದರ್ಶನ್ ಅವರ ಎರಡನೇ ಪತ್ನಿನಾ…?
ವಿಜಯಲಕ್ಷ್ಮಿ ಇದೀಗ ದರ್ಶನ್ ಮತ್ತು ಪವಿತ್ರ ಗೌಡ ನಡಿವಿನ ಸಂಬಂಧದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಪವಿತ್ರ ಗೌಡ ದರ್ಶನ್ ಅವರ ಎರಡನೇ ಪತ್ನಿನಾ ಅಥವಾ ಅಲ್ಲವಾ ಎನ್ನುವ ಬಗ್ಗೆ ಪತ್ರ ಬರೆಯುವ ಮೂಲಕ ವಿಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ನಡುವಿನ ಸಂಬಂಧದ ಕುರಿತು ಆಯುಕ್ತ ಪೊಲೀಸ್ ಕಮಿಷನರ್ ಬಿ ದಯಾನಂದ್ ನೀಡಿರುವ ಉಲ್ಲೇಖಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನದ ಕುರಿತು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸುದ್ದಿಗೋಷ್ಠಿ ನಡೆಸಿದರು. ಆ ವೇಳೆ ದರ್ಶನ್ ಪತ್ನಿ, ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ರವಾನಿಸಿದ್ದನ್ನು ಪ್ರಸ್ತಾಪಿಸಿದ್ದರು. ಆ ಸುದ್ದಿ ಎಲ್ಲಾ ಮಾಧ್ಯಮಗಳು ಮತ್ತು ಪತ್ರಿಕೆಗಳಲ್ಲಿ ಪ್ರಸಾರವಾಯಿತು. ಈ ಕುರಿತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದಿದ್ದಾರೆ.
ವಿಜಯಲಕ್ಷ್ಮಿ ಸ್ಪಷ್ಟನೆ ಏನು ಗೊತ್ತಾ…?
ದರ್ಶನ್ ಪತ್ನಿ ಪವಿತ್ರಾ ಗೌಡ ಎಂದು ನೀವು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದೀರಿ. ನಾನು ದರ್ಶನ್ ಗೆ ಕಾನೂನುಬದ್ಧವಾಗಿ ಮದುವೆಯಾಗಿರುವ ಏಕೈಕ ಪತ್ನಿ. ನಮ್ಮ ವಿವಾಹವು 19.05.2003 ರಂದು ಧರ್ಮಸ್ಥಳದಲ್ಲಿ ನೆರವೇರಿತು. ಪವಿತ್ರ ಗೌಡ ನನ್ನ ಪತಿ ದರ್ಶನ್ ಗೆ ಸ್ನೇಹಿತೆ.
ಅವರು ದರ್ಶನ್ ಅವರ ಪತ್ನಿ ಅಲ್ಲ ಎಂಬುದನ್ನು ದಯವಿಟ್ಟು ಗಮನಿಸಿ. ಇನ್ನು ಎ1 ಆರೋಪಿ ಪವಿತ್ರಾ ಗೌಡ ದರ್ಶನ್ ಪತ್ನಿ ಎಂದು ನೀವು ಹಾಗೂ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಇದು ನನ್ನ ಮತ್ತು ನನ್ನ ಮಗನ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಪವಿತ್ರಾ ಗೌಡ ಸಂಜಯ್ ಸಿಂಗ್ ಅವರನ್ನು ವಿವಾಹವಾಗಿದ್ದಾರೆ. ಅವರಿಗೆ ಒಬ್ಬ ಮಗಳೂ ಇದ್ದಾಳೆ. ಆದ್ದರಿಂದ ದಯವಿಟ್ಟು ಪೊಲೀಸ್ ದಾಖಲೆಗಳನ್ನು ಸರಿಪಡಿಸಿ ಎಂದು ವಿಜಯಲಕ್ಷ್ಮಿ ಪತ್ರದಲ್ಲಿ ಬರೆದಿದ್ದಾರೆ.
Post Office Monthly Income Scheme: ಅಂಚೆ ಇಲಾಖೆಯ ವಿವಿಧ ಯೋಜನೆಗಳಲ್ಲಿ ಮಾಸಿಕ ಸಣ್ಣ ಮೊತ್ತದ ಹೂಡಿಕೆಯಲ್ಲಿ ದೊಡ್ಡ ಮೊತ್ತದ…
Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…
Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…
Darshan Case New Update: ಸದ್ಯ ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…
Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…
Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…