Vijayalakshmi Letter: ಪವಿತ್ರ ಗೌಡ ಮತ್ತು ದರ್ಶನ್ ನಡುವೆ ಇರುವ ಸಂಬಂಧ ಯಾವುದು…? ಸ್ಪಷ್ಟನೆ ನೀಡಿದ ವಿಜಯಲಕ್ಷ್ಮಿ
ಪವಿತ್ರ ಗೌಡ ಮತ್ತು ದರ್ಶನ್ ನಡುವೆ ಇರುವ ಸಂಬಂಧ ಯಾವುದು...?
Vijayalakshmi Wrote A Letter: ಸದ್ಯ ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ದರ್ಶನ್ ಜೈಲು ಪಾಲಾಗಿದ್ದಾರೆ. ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ಕೋಪಕ್ಕೆ ದರ್ಶನ್ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ್ದಾರೆ. ಈ ಸಂಬಂಧ ದರ್ಶನ್ ಮತ್ತು ಅವರ ಗೆಳತೀ ಪವಿತ್ರ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇನ್ನು ಈ ಪ್ರಕರಣ ಬೆಳಕಿಗೆ ಬಂದ ನಂತರ ದರ್ಶನ್ ಮತ್ತು ಪವಿತ್ರ ಗೌಡ ಸಂಬಂಧದ ಬಗ್ಗೆ ಮಾತುಗಳು ಸಾಕಷ್ಟು ಕೇಳಿ ಬರುತ್ತಿದೆ. ಅಲ್ಲದೆ ಕೆಲವೆಡೆ ಪವಿತ್ರ ಗೌಡ ಅವರನ್ನು ದರ್ಶನ್ ಪತ್ನಿ ಎಂದು ಉಲ್ಲೇಖಿಸಲಾಗಿದೆ. ಸದ್ಯ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಈ ಹೇಳಿಕೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪವಿತ್ರ ಗೌಡ ಮತ್ತು ದರ್ಶನ್ ನಡುವೆ ಇರುವ ಸಂಬಂಧ ಯಾವುದು…?
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ನಡುವಿನ ಸಂಬಂಧದ ಕುರಿತು ಆಯುಕ್ತ ಪೊಲೀಸ್ ಕಮಿಷನರ್ ಬಿ ದಯಾನಂದ್ ನೀಡಿರುವ ಉಲ್ಲೇಖಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನದ ಕುರಿತು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸುದ್ದಿಗೋಷ್ಠಿ ನಡೆಸಿದರು. ಆ ವೇಳೆ ದರ್ಶನ್ ಪತ್ನಿ, ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ರವಾನಿಸಿದ್ದನ್ನು ಪ್ರಸ್ತಾಪಿಸಿದ್ದರು. ಆ ಸುದ್ದಿ ಎಲ್ಲಾ ಮಾಧ್ಯಮಗಳು ಮತ್ತು ಪತ್ರಿಕೆಗಳಲ್ಲಿ ಪ್ರಸಾರವಾಯಿತು. ಈ ಕುರಿತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದಿದ್ದಾರೆ.
ಸ್ಪಷ್ಟನೆ ನೀಡಿದ ವಿಜಯಲಕ್ಷ್ಮಿ
ದರ್ಶನ್ ಪತ್ನಿ ಪವಿತ್ರಾ ಗೌಡ ಎಂದು ನೀವು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದೀರಿ. ನಾನು ದರ್ಶನ್ ಗೆ ಕಾನೂನುಬದ್ಧವಾಗಿ ಮದುವೆಯಾಗಿರುವ ಏಕೈಕ ಪತ್ನಿ. ನಮ್ಮ ವಿವಾಹವು 19.05.2003 ರಂದು ಧರ್ಮಸ್ಥಳದಲ್ಲಿ ನೆರವೇರಿತು. ಪವಿತ್ರ ಗೌಡ ನನ್ನ ಪತಿ ದರ್ಶನ್ ಗೆ ಸ್ನೇಹಿತ. ಅವರು ದರ್ಶನ್ ಅವರ ಪತ್ನಿ ಅಲ್ಲ ಅನ್ನುವುದನ್ನು ದಯವಿಟ್ಟು ಗಮನಿಸಿ.
ಇನ್ನು ಎ1 ಆರೋಪಿ ಪವಿತ್ರಾ ಗೌಡ ದರ್ಶನ್ ಪತ್ನಿ ಎಂದು ನೀವು ಹಾಗೂ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಇದು ನನ್ನ ಮತ್ತು ನನ್ನ ಮಗನ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಪವಿತ್ರಾ ಗೌಡ ಸಂಜಯ್ ಸಿಂಗ್ ಅವರನ್ನು ವಿವಾಹವಾಗಿದ್ದಾರೆ. ಅವರಿಗೆ ಒಬ್ಬ ಮಗಳೂ ಇದ್ದಾಳೆ. ಆದ್ದರಿಂದ ದಯವಿಟ್ಟು ಪೊಲೀಸ್ ದಾಖಲೆಗಳನ್ನು ಸರಿಪಡಿಸಿ ಎಂದು ವಿಜಯಲಕ್ಷ್ಮಿ ಪತ್ರದಲ್ಲಿ ಬರೆದಿದ್ದಾರೆ.