Image Credit: Original Source
Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು. ಕೆಲವು ವಾರಗಳ ಹಿಂದೆ ಯುವ ರಾಜಕುಮಾರ್ ಹಾಗೂ ಶ್ರೀದೇವಿ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದ್ದು, ಇಬ್ಬರು ವಿಚ್ಛೇದನದ ಪಡೆಯಲಿದ್ದಾರೆ ಎನ್ನುವ ಬಗ್ಗೆ ಸುದ್ದಿ ವೈರಲ್ ಆಗಿತ್ತು.
ಸದ್ಯ ಯುವ ರಾಜಕುಮಾರ್ ವಿಚ್ಛೇದನದ ಸುದ್ದಿಯ ಜೊತೆಗೆ ಯುವ ರಾಜಕುಮಾರ್ ಅವರ ಅಣ್ಣ Vinay Rajkumar ಸದ್ದಿಲ್ಲದೇ ಮದುವೆ ಆಗಿದ್ದಾರೆ ಎನ್ನುವ ಬಗೆ ಸುದ್ದಿ ವೈರಲ್ ಆಗುತ್ತಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವಿನಯ್ ರಾಜಕುಮಾರ್ ಮದುವೆಯ ಫೋಟೋಗಳು ಬಾರಿ ವೈರಲ್ ಆಗುತ್ತಿದೆ.
ಸದ್ದಿಲ್ಲದೇ ಮದುವೆ ಮಾಡಿಕೊಂಡ್ರಾ ವಿನಯ್ ರಾಜಕುಮಾರ್
ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಎಲ್ಲ ರೀತಿಯ ಸುದ್ದಿಗಳು ಬಹುಬೇಗ ಜನರನ್ನು ತಲುಪುತ್ತಿದೆ ಎನ್ನಬಹುದು. ಸೋಶಿಯಲ್ ಮೀಡಿಯಾದಲ್ಲಿ ಹರಿಯುತ್ತಿರುವ ಸುದ್ದಿಗಳು ಅಸಲಿಯೋ, ನಕಲಿಯೋ ಎಂದು ತಿಳಿಯುವಷ್ಟರಲ್ಲಿ ದೊಡ್ಡ ಸಮಸ್ಯೆಯೇ ಸೃಷ್ಟಿಯಾಗಿಬಿಡುತ್ತದೆ. ಹೀಗಿರುವಾಗ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ಫೋಟೋ ಸದ್ಯ ನಟ ವಿನಯ ರಾಜ್ ಕುಮಾರ್ ಗೆ ಸಂಕಷ್ಟವನ್ನು ತಂದೊಡ್ಡಿದೆ ಎನ್ನಬಹುದು. ವಿನಯ್ ಸದ್ದಿಲ್ಲದೇ ಗುಟ್ಟಾಗಿ ಮದುವೆಯಾಗಿದ್ದಾರೆ ಎನ್ನುವುದು ಸದ್ಯದ ಮಾತಾಗಿದೆ.
ಇದೀಗ ಸ್ವಾತಿಷ್ಠ ಕೃಷ್ಣನ್ ಮತ್ತು ವಿನಯ್ ರಾಜ್ಕುಮಾರ್ ಮಧುಮಗ ಮತ್ತು ಮಧುಮಗಳ ಗೆಟಪ್ ಫೋಟೋಗಳು ವೈರಲ್ ಆಗಿವೆ. ಆದರೆ ಈ ವೈರಲ್ ಫೋಟೋ ಹಿಂದಿನ ಸತ್ಯ ಬೇರೆಯೇ ಇದೆ. ವಿಕ್ರಮ್ ಚಿತ್ರದಲ್ಲಿ ಕಮಲ್ ಹಾಸನ್ ಸೊಸೆಯಾಗಿ ನಟಿಸಿದ್ದ ಸ್ವಾತಿಷ್ಠಾ ಕೃಷ್ಣನ್ ವಿನಯ್ ರಾಜ್ ಕುಮಾರ್ ಜೊತೆ ಒಂದು ಸರಳ ಪ್ರೇಮಕಥೆ ಚಿತ್ರದಲ್ಲಿ ತೆರೆ ಹಂಚಿಕೊಂಡಿದ್ದಾರೆ. ಸ್ವಾತಿಷ್ಠಾ ಇತ್ತೀಚೆಗೆ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಚಿತ್ರದಲ್ಲಿನ ಮದುವೆ ಸಮಾರಂಭದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ಎಲ್ಲ ವೈರಲ್ ಸುದ್ದಿಗೆ ಕಾರಣವಾಗಿದೆ.
ವೈರಲ್ ಆಗಿದೆ ಫೋಟೋಸ್
ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡ ನಟಿ ಒಂದು ಸರಳ ಪ್ರೇಮಕಥೆಯ ತೆರೆಯ ಹಿಂದಿನ ಕಥೆ ಎಂದು ಬರೆದಿದ್ದಾರೆ. ಈ ಚಿತ್ರದ ಗುಂಗಿನಿಂದ ಹೊರಬರಲು ಸಾಧ್ಯವೇ ಇಲ್ಲ ಎಂದು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಆದರೆ ಇದನ್ನು ಗಮನಿಸದ ಕೆಲವರು ಸ್ವಾತಿಷ್ಠ ಕೃಷ್ಣನ್ ಹಾಗೂ ವಿನಯ್ ರಾಜ್ ಕುಮಾರ್ ಅವರಿಗೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ನಿಮ್ಮ ಜೋಡಿ ಚೆನ್ನಾಗಿದೆ. ಇಬ್ಬರೂ ಮದುವೆಯಾಗಿ ಎನ್ನುತ್ತಿದ್ದಾರೆ. ತುಂಬಾ ಮುದ್ದಾದ ಜೋಡಿ. ನೀವು ದೊಡ್ಮನೆ ಸೊಸೆಯಾದರೆ ಚೆನ್ನಾಗಿರುತ್ತದೆ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಕಂಡ ಕೆಲವರು ವಿನಯ್ ರಾಜ್ ಇನ್ನೊಂದು ಮದುವೆ ಮಾಡಿಕೊಂಡರ ಎನ್ನುವ ಪ್ರಶ್ನೆಯನ್ನು ಮಾಡುತ್ತಿದ್ದಾರೆ. ಆದರೆ ಇದು ಒಂದು ಸರಳ ಪ್ರೇಮಕಥೆ ಚಿತ್ರದ ಫೋಟೋಗಳು ಎನ್ನುವುದು ಅಸಲಿ ಸತ್ಯವಾಗಿದೆ.
Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…
Guarantee Scheme Latest Update: ಸದ್ಯ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ರಾಜ್ಯ್ದ ಜನತೆ ಸರ್ಕಾರದ ಉಚಿತ ಗ್ಯಾರಂಟಿ…
HSRP Number Plate New Update: ಸದ್ಯ ದೇಶದಲ್ಲಿ HSRP Number Plate ಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್…
Railway Promotion Exam New Update: ಸದ್ಯ ರಾಜ್ಯದಲ್ಲಿ ಕನ್ನಡ ಉಳಿವಿಗಾಗಿ ಈಗಾಗಲೇ ಸಾಕಷ್ಟು ಕ್ರಮ ಕೈಗೊಳಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡ…
HDFC Bank Credit Card Rules Change: ದೇಶದ ಪ್ರತಿಷ್ಠಿತ ಬ್ಯಾಂಕ್ ಗಳು ತನ್ನ ಗ್ರಾಹಕರಿಗೆ Credit card ಸೌಲಭ್ಯವನ್ನು…
Bagar Hukum New Update: ಸದ್ಯ ರಾಜ್ಯ ಸರ್ಕಾರ ರಾಜ್ಯದ ಜನತೆಗಾಗಿ ವಿವಿಧ ಸೌಲಭ್ಯವನ್ನು ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರ…