Vishwakarma Yojana: ದೇಶದ ಎಲ್ಲಾ ಕಾರ್ಮಿಕರಿಗೆ ಸಿಗಲಿದೆ 2 ಲಕ್ಷ ರೂಪಾಯಿ, ಕೇಂದ್ರ ಸರ್ಕಾರದ ಸ್ವಾತಂತ್ರ್ಯ ದಿನದ ಘೋಷಣೆ.
ಬಡ ಕಾರ್ಮಿಕರಿಗೆ ನೆರವಾಗಲು ವಿಶ್ವಕರ್ಮ ಯೋಜನೆಯನ್ನ ಜಾರಿಗೊಳಿಸಿದ ಕೇಂದ್ರ ಸರ್ಕಾರ.
Vishwakarma Yojana Update: ಕೇಂದ್ರದ ಮೋದಿ ಸರ್ಕಾರ ದೇಶದ ಬಡ ನಾಗರೀಕರಿಗಾಗಿ ವಿವಿಧ ಯೋಜನೆಯನ್ನು ಪರಿಚಯಿಸಿದೆ. ಮೋದಿ ಸರ್ಕಾರದ ವಿವಿಧ ಯೋಜನೆಯ ಲಾಭವನ್ನು ಜನರು ಪಡೆಯುತ್ತಿದ್ದಾರೆ. ದೇಶದಲ್ಲಿ ಬಡತನ ನಿರ್ಮೂಲನೆಗಾಗಿ ಮೋದಿ ಸರ್ಕಾರ ಹೊಸ ಹೊಸ ಹೆಜ್ಜೆ ಇಡುತ್ತಲೇ ಇದೆ.
ದೇಶದ ಜನರು ಸರ್ಕಾರ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕಿದೆ. ಇನ್ನು ಎಡಿಎ ಕಾರ್ಮಿಕರಿಗೆ ಆರ್ಥಿಕವಾಗಿ ನೆರವಾಗಲು ಸರ್ಕಾರ ವಿವಿಧ ಸೌಲಭ್ಯವನ್ನು ನೀಡಿದೆ. ಇದೀಗ ಕೇಂದ್ರ ಸರ್ಕಾರ ಕಾರ್ಮಿಕರಾಗಿ ಹೊಸ ಯೋಜನೆಯನ್ನು ರೂಪಿಸಲು ನಿರ್ಧರಿಸಿದೆ. ಕಾರ್ಮಿಕರಿಗಾಗಿ ವಿಶೇಷ ಸಾಲ ಸೌಲಭ್ಯ ನೀಡಲು ಮೋದಿ ಸರ್ಕಾರ ಮುಂದಾಗಿದೆ. ಈ ಮೂಲಕ ದೇಶದ ಬಡ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.
ದೇಶದ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್
ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಕಾರ್ಮಿಕರಿಗೆ ಹೊಸ ಯೋಜನೆಯನ್ನು ರೂಪಿಸುವ ಬಗ್ಗೆ ಘೋಷಣೆ ಹೊರಡಿಸಿದ್ದಾರೆ.
ಮೋದಿ ಅವರು ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಜನರನ್ನು ಬೆಂಬಲಿಸುವ ಉದ್ದೇಶದಿಂದ ವಿಶ್ವಕರ್ಮ ಯೋಜನೆಯನ್ನು (Vishwakarma Yojana) ರೂಪಿಸಲಿದ್ದಾರೆ ಎನ್ನುವ ಬಗ್ಗೆ ಮಾಹಿತಿ ನೀಡಿದ್ದಾರೆ. 1300 ಕೋಟಿ ವಿಷ್ಕರ್ಮ ಯೋಜನೆಯಡಿ, ಕುಶಲಕರ್ಮಿಗಳು 2 ಲಕ್ಷದವರೆಗೆ ಸಾಲವನ್ನು ಪಡೆಯಬಹುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದ್ದಾರೆ.
ಕಾರ್ಮಿಕರಿಗೆ 2 ಲಕ್ಷ ರೂ. ಸಾಲ ಸೌಲಭ್ಯ
ಪ್ರಧಾನಿ ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳಿಗೆ ಮೊದಲನೇ ಕಂತಿನಲ್ಲಿ 5 % ಬಡ್ಡಿಯಲ್ಲಿ ರೂ. 1 ಲಕ್ಷ ಸಾಲ, ಎರಡನೇ ಕಂತಿನಲ್ಲಿ 2 ಲಕ್ಷ ರೂ. ಸಾಲವನ್ನು ನೀಡಿ 5 % ರಿಯಾಯಿತಿ ಬಡ್ಡಿದರದಲ್ಲಿ ನೀಡಲಾಗುತ್ತದೆ ಎನ್ನುವ ಬಗ್ಗೆ ಹೇಳಿಕೆ ನೀಡಿದ್ದಾರೆ.
ಈ ಯೋಜನೆಯಡಿ ಕೌಶಲ್ಯ ತರಭೇತಿಗೆ 500 ರೂ. ಸ್ಟೈಫಂಡ್ ಮತ್ತು ಆಧುನಿಕ ಉಪಕರಣಗಳನ್ನು ಖರೀದಿಸಲು 1500 ರೂ. ನೀಡಲಾಗುತ್ತದೆ. ಯೋಜನೆಯ ಲಾಭ ಪಡೆಯಲು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು.