Yuva Nidhi Big Update 2024: Congress ಸರ್ಕಾರದ ಐದು ಉಚಿತ ಗ್ಯಾರಂಟಿ ಯೋಜನೆಗಳು ಈಗಾಗಲೇ ರಾಜ್ಯದಲ್ಲಿ ಅನುಷ್ಠಾನಗೊಂಡಿದೆ. ರಾಜ್ಯದ ಜನತೆ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ಇನ್ನು ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯದಾಗಿ Yuva Nidhi ಯೋಜನೆಯು ಜಾರಿಯಾಗಿತ್ತು. ಜನವರಿ 2024 ರಲ್ಲಿ ಯುವ ನಿಧಿ ಯೋಜನೆಯಡಿ ನಿರುದ್ಯೋಗಿಗಳು ನಿರುದ್ಯೋಗ ಭತ್ಯೆಯನ್ನು ಪಡೆದಿದ್ದಾರೆ.
ಅರ್ಹ ಫಲಾನುಭವಿಗಳ ಖಾತೆಗೆ ಅವರ ವಿದ್ಯಾರ್ಹತೆಯ ಆಧಾರದ ಮೇಲೆ ಮಾಸಿಕ ಭತ್ಯೆ ಲಭ್ಯವಾಗಿದೆ. ಇನ್ನು ರಾಜ್ಯ ಸರ್ಕಾರ ಯುವ ನಿಧಿ ಯೋಜನೆಯಡಿ ಫೆಬ್ರವರಿ ತಿಂಗಳ ಎರಡನೇ ಕಂತಿನ ಹಣ ಬಿಡುಗಡೆಗೆ ಸಜ್ಜಾಗಿದೆ. ಇನ್ನು ನೀವು ಗಮನಿಸ ಬೇಕಾದ ವಿಷಯ ಏನೆಂದರೆ, ಫೆಬ್ರವರಿ ತಿಂಗಳ ಭತ್ಯೆಯನ್ನು ಪಡೆಯಲು ಫಲಾನುಭವಿಗಳು ಈ ಕೆಲಸ ಮಾಡುವುದು ಕಡ್ಡಾಯವಾಗಿದೆ.
ಫೆ. ತಿಂಗಳ ನಿರುದ್ಯೋಗ ಭತ್ಯೆ ಪಡೆಯಲು ನಿಯಮ ಕಡ್ಡಾಯ
ಪದವಿ ವಿದ್ಯಾರ್ಥಿಗಳಿಗೆ 3,000 ಹಾಗೂ ಡಿಪ್ಲೊಮೊ ವಿದ್ಯಾರ್ಥಿಗಳಿಗೆ 1,500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಯುವ ನಿಧಿ ಯೋಜನೆಯಡಿ ಸರ್ಕಾರ ನೀಡುತ್ತಿದೆ. ಈಗಾಗಲೇ ಯುವ ನಿಧಿ ಯೋಜನೆಯಡಿ ನಿರುದ್ಯೋಗಿಗಳಿಗೆ ಒಂದು ತಿಂಗಳ ಭತ್ಯೆ ಹಣ ಜಮಾ ಆಗಿದೆ. ಫಲಾನುಭವಿಗಳು ಮಾಸಿಕ ಹಣವನ್ನು ಪಡೆದುಕೊಂಡಿದ್ದಾರೆ. ಸದ್ಯ ಎರಡನೇ ಕಂತಿನ ಭತ್ಯೆ ಪಡೆಯುವ ಸಮಯ ಬಂದಿದೆ. ಎರಡನೇ ತಿಂಗಳ ನಿರುದ್ಯೋಗ ಭತ್ಯೆ ಪಡೆಯಬೇಕಿದ್ದರೆ ಈ ನಿಯಮ ಪಾಲನೆ ಕಡ್ಡಾಯವಾಗಿದೆ.
ನೀವು ಯುವ ನಿಧಿ ಯೋಜನೆಯ ಹಣವನ್ನು ಫೆಬ್ರವರಿ ತಿಂಗಳಲಿನಲ್ಲಿ ಪಡೆಯಬೇಕಿದ್ದರೆ ಈ ದಾಖಲೆ ನೀಡುವುದು ಕಡ್ಡಾಯವಾಗಿದೆ. ಈ ದಾಖಲೇ ನೀಡುವಲ್ಲಿ ವಿಫಲವಾದರೆ ನಿಮಗೆ ಈ ತಿಂಗಳ ಭತ್ಯೆಯ ಹಣ ಜಮಾ ಆಗುವುದಿಲ್ಲ ಎನ್ನುವುದು ನಿಮಗೆ ತಿಳಿದಿರಲಿ. ನಿರುದ್ಯೋಗ ಭತ್ಯೆ ಪಡೆಯುವ ಫಲಾನುಭವಿಗಳು ಪ್ರತಿ ತಿಂಗಳು “ಸ್ವಯಂ ಘೋಷಿತ ಪ್ರಮಾಣಪತ್ರ”ವನ್ನು Upload ಮಾಡಬೇಕು ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ನಿರುದ್ಯೋಗಿಗಳಿಗೆ “ಸ್ವಯಂ ಉದ್ಯೋಗಿಯಲ್ಲ” ಎನ್ನುವ ಘೋಷಣೆ ಕಡ್ಡಾಯ
ಪ್ರತಿ ತಿಂಗಳು ಅಭ್ಯರ್ಥಿಗಳು ತಾವು ಉದ್ಯೋಗ ಪಡೆದಿಲ್ಲ ಮತ್ತು ಉನ್ನತ ಶಿಕ್ಷಣಕ್ಕೆ ಹೋಗಿಲ್ಲ, ಉದ್ಯೋಗಿಯಲ್ಲ ಎಂದು ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು Upload ಮಾಡಬೇಕು. ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು Upload ಮಾಡಿದರೆ ಮಾತ್ರ ಫಲಾನುಭವಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಸಾಧ್ಯವಾಗುತ್ತದೆ.
ಫೆ. 29 ರವರೆಗೆ ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು ಅಪ್ ಲೋಡ್ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಇನ್ನು http://sevasindhugs.karnataka.gov.in ಅಧಿಕೃತ ವೆಬ್ ಸೈಟ್ ನಲ್ಲಿ ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು Upload ಮಾಡಬಹುದಾಗಿದೆ.
Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…
PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…
Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…
Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…
July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…
7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…