Image Credit: Original Source
Yuva Nidhi Scheme Application Process: ಯುವನಿಧಿ ಯೋಜನೆಯನ್ನು ಹೊಸ ವರ್ಷದ ಆರಂಭದಿಂದ ಪ್ರಾರಂಭಿಸಲಿದ್ದು, ಈ ಯೋಜನೆಗೆ ಸರಕಾರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ. ಇಂದಿನಿಂದಲೇ ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ.
ಈ ಯುವನಿಧಿ ಯೋಜನೆಯಡಿ 2023-24ನೇ ಸಾಲಿನಲ್ಲಿ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ, 6 ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಮುಂದಿನ 24 ತಿಂಗಳು ಪದವೀಧರರಿಗೆ ಮಾಸಿಕ 3000ರೂ., ಡಿಪ್ಲೋಮಾ ಮುಗಿಸಿದವರಿಗೆ ಮಾಸಿಕ 1500ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.
ಅರ್ಜಿ ನೋಂದಾವಣೆಗೆ ಬೇಕಾಗಿರುವ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸಲು ಮತದಾರರ ಗುರುತಿನ ಚೀಟಿ, ಪದವಿ ಅಭ್ಯರ್ಥಿ ಗಳಾಗಿದ್ದರೆ ಅಂಕಪಟ್ಟಿ ಮತ್ತು ವಿಶ್ವವಿದ್ಯಾಲಯದ ಪದವಿ ಪ್ರಮಾಣ ಪತ್ರ, ಡಿಪ್ಲೋಮಾ ಹೊಂದಿದ್ದರೆ ಸಂಬಂಧಿಸಿದ ಶಿಕ್ಷಣ ಇಲಾಖೆಯಿಂದ ನೀಡಿದ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಮತ್ತು ಅದರ ಮಾಹಿತಿ ಅಗತ್ಯವಿದೆ.
ಅರ್ಜಿ ಸಲ್ಲಿಸುವ ವಿಧಾನ
ಸೇವಾಸಿಂಧು, ಗ್ರಾಮ ಒನ್, ಕರ್ನಾಟಕ ಒನ್ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು (ಡಿಬಿಟಿ) ಸ್ವೀಕರಿಸಲು ಮೊಬೈಲ್ ಸಂಖ್ಯೆಗೆ ಲಿಂಕ್ ಆದ ಆಧಾರ್ ಸಂಖ್ಯೆಯ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು.ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತ್ತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು ಪ್ರತಿ ನೀಡಬೇಕು. ಪದವಿ, ಡಿಪ್ಲೋಮಾ ಬಳಿಕ ಉನ್ನತ ಶಿಕ್ಷಣ ಮುಂದು ವರಿಸಿದರೆ ಈ ಭತ್ಯೆಗೆ ಅರ್ಹರಾಗುವುದಿಲ್ಲ.
ಸ್ವಯಂಘೋಷಣೆ ಕಡ್ಡಾಯ ಆಗಿದೆ
ಅಭ್ಯರ್ಥಿ ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಿಸಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು. ಈ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದು ಅರ್ಜಿ ನೋಂದಾಯಿಸತಕ್ಕದ್ದು.
Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…
PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…
Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…
Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…
July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…
7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…